AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?

ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತಗೊಂಡಿದ್ದು, 22 ಅಭ್ಯರ್ಥಿಗಳ ಉಮೇದುವಾರಿಕೆಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪನಾಗ್ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಡಾ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಕಥೆ ಏನಾಯ್ತು ಎನ್ನುವ ವಿವರ ಇಲ್ಲಿದೆ.

ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?
TV9 Web
| Edited By: |

Updated on: Apr 05, 2024 | 10:14 PM

Share

ಚಾಮರಾಜನಗರ, (ಏಪ್ರಿಲ್, 5): ಚಾಮರಾಜನಗರ ಎಸ್​​ಸಿ ಲೋಕಸಭಾ(chamarajanagar Loksabha constituency) ಕ್ಷೇತ್ರಕ್ಕೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಮಾಡಲಾಗಿದ್ದು, ಮೂವರ ನಾಮಪತ್ರ ತಿರಸ್ಕೃತಗೊಂಡಿವೆ. ಇನ್ನು 22 ಅಭ್ಯರ್ಥಿಗಳದ್ದು ಕ್ರಮಬದ್ಧವಾಗಿವೆ ಎಂದು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಅಭ್ಯರ್ಥಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರವೂ ಸಹ ಕ್ರಮಬದ್ಧವಾಗಿದೆ. ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಸರಿಯಾದ ಮಾಹಿತಿ ನೀಡಿಲ್ಲ. ಹೀಗಾಗಿ ಅವರ ಉಮೇದುವಾರಿಕೆ ತಿರಸ್ಕೃತಗೊಳಿಸಬೇಕೆಂದು ಬಿಜೆಪಿ ದೂರು ನೀಡಿತ್ತು. ಆದ್ರೆ, ಚುನಾವಣಾಧಿಕಾರಿ ಎಲ್ಲಾ ಪರಿಶೀಲನೆ ನಡೆಸಿದ್ದು, ಎಲ್ಲವೂ ಸರಿಯಾಗಿದೆ ಎಂದು ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ. ಇದರಿಂದ ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟಿದ್ದಾರೆ. ಇನ್ನು ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಮುಖಭಂಗವಾಗಿದೆ.

ಸಮಾಜವಾದಿ ಪಕ್ಷದ ಚಾಮದಾಸ್, ಪಕ್ಷೇತರ ಅಭ್ಯರ್ಥಿಗಳಾದ ಗುರುಲಿಂಗಯ್ಯ ಮತ್ತು ಸಿ.ರಾಜು ಅವರ ನಾಮಪತ್ರ ತಿರಸ್ಕೃತವಾಗಿದೆ. ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿ ಬಾಲರಾಜು, ಕಾಂಗ್ರೆಸ್ ‌ ಅಭ್ಯರ್ಥಿ ಸುನೀಲ್ ಬೋಸ್ ಸೇರಿದಂತೆ ಒಟ್ಟು 22 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಸ್ಪಷ್ಟಪಡಿಸಿದ್ದಾರೆ. ಇನ್ನೂ ನಾಮಪತ್ರ ವಾಪಸ್ ಪಡೆದುಕೊಳ್ಳುವುದಕ್ಕೂ ಸಮಯವಕಾಶ ಇದ್ದು, ಯಾರೆಲ್ಲ ವಾಪಸ್ ಪಡೆಯುತ್ತಾರೆ, ಯಾರೆಲ್ಲಾ ಕಣದಲ್ಲಿ ಉಳಿಯಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತವಾಗುತ್ತಾ?

ಇನ್ನು ಮುಖ್ಯವಾಗಿ ಎಲ್ಲರೂ ಆತಂಕ ಮೂಡಿಸಿದ್ದು ಅಂದರೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ನಾಮಪತ್ರದ ಬಗ್ಗೆ. ಯಾಕಂದ್ರೆ, ಸುನೀಲ್ ಬೋಸ್ ಅವರು ತಮ್ಮ ವೈವಾಹಿಕ ಜೀವನ ಬಗ್ಗೆ ನಾಮಪತ್ರದಲ್ಲಿ ಮಾಹಿತಿ ನೀಡದೇ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಅಲ್ಲದೇ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಬಿಜೆಪಿ ಅಭ್ಯರ್ಥಿ ಬಾಲರಾಜ ಅವರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಆದ್ರೆ, ಇದೀಗ ಸುನೀಲ್ ಬೋಸ್ ಅವರ ನಾಮಪತ್ರ ಸರಿಯಾಗಿದೆ ಎಂದು ಚುನಾವಣಾಧಿಕಾರಿ ಅಂಗೀಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ನಿರಾಳರಾಗಿದ್ದಾರೆ.

ಬಿಜೆಪಿ ಆರೋಪವೇನಾಗಿತ್ತು?

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್