AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲಕ್ಕೆ ನುಗ್ಗಿದ ಹಸು, ಎತ್ತುಗಳ ಮೇಲೆ ಮಚ್ಚಿನಿಂದ ಹಲ್ಲೆ; ಟಿಬೇಟಿಯನ್ ರೈತನ ಮೇಲೆ ಮಾಲೀಕರ ಆಕ್ರೋಶ

ಚಾಮರಾಜನಗರ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಗೋಮಾತೆ, ಕಾಮಧೇನು ಎಂದು ಪೂಜಿಸುವ ಹಸು, ಎಮ್ಮೆಗಳ ಮೇಲೆ ಟಿಬೇಟಿಯನ್ ರೈತ ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾನೆ. ಹಸು, ಎಮ್ಮೆ ಮಾಲೀಕರು ಕಣ್ಣೀರು ಹಾಕಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿವೆ.

ಹೊಲಕ್ಕೆ ನುಗ್ಗಿದ ಹಸು, ಎತ್ತುಗಳ ಮೇಲೆ ಮಚ್ಚಿನಿಂದ ಹಲ್ಲೆ; ಟಿಬೇಟಿಯನ್ ರೈತನ ಮೇಲೆ ಮಾಲೀಕರ ಆಕ್ರೋಶ
ಹಸು, ಎತ್ತುಗಳ ಮೇಲೆ ಮಚ್ಚಿನಿಂದ ಹಲ್ಲೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 29, 2024 | 10:47 AM

Share

ಚಾಮರಾಜನಗರ, ಫೆ.29: ಹೊಲಕ್ಕೆ ನುಗ್ಗಿದ ಹಸು, ಎತ್ತುಗಳ ಮೇಲೆ ಮಚ್ಚಿನಿಂದ ದಾಳಿ (Assault) ನಡೆಸಿ ವಿಕೃತಿ ಮೆರೆಯಲಾದ ಅಮಾನವೀಯ ಘಟನೆ ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಒಡೆಯರಪಾಳ್ಯ ಟಿಬೇಟಿಯನ್ ಕಾಲೋನಿಯಲ್ಲಿ ನಡೆದಿದೆ. ದನಗಳ ಕಾಲುಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು ದನಗಳು ನೋವಿನಿಂದ ನರಳುತ್ತಿವೆ. ಅಲ್ಲದೆ ಹಲ್ಲೆ ನಡೆದ ಜಾಗದಲ್ಲಿ ಮಾಂಸ ಕಿತ್ತು ಬಂದಿದ್ದು ರಕ್ತ ಸುರಿಯುತ್ತಿದೆ.

”ತ್ವಂ ಮಾತಾ ಸರ್ವ ದೇವಾನಾಂ ತ್ವಂ ಚ ಯಜ್ಞಸ್ಯ ಕಾರಣಂ| ತ್ವಂ ತೀರ್ಥ ಸರ್ವತೀರ್ಥಾನಾಂ ನಮಸ್ತೇಸ್ತು ಸದಾನಧೇ||” ಎಂದು ಗೋವನ್ನು ಪೂಜ್ಯ ಭಾವದಿಂದ ನೋಡಲಾಗುತ್ತೆ. ಮುಕ್ಕೋಟಿ ದೇವತೆಗಳು ನೆಲೆಸಿದ್ದಾರೆಂದು ಹಸುವನ್ನು ಕಾಮಧೇನು ಎಂದು ಪೂಜಿಸಲಾಗುತ್ತೆ. ಆದರೆ ಟಿಬೇಟಿಯನ್ ಕಾಲೋನಿಯಲ್ಲಿ ಕೆಲ ದುಷ್ಕರ್ಮಿಗಳು ಹಸು, ದನಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಹೊಲಕ್ಕೆ ನುಗ್ಗಿದವೆಂದು ಎಂಟಕ್ಕೂ ಹೆಚ್ಚು ಎತ್ತು ಹಾಗೂ ಹಸುಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಗುಂಡಿಮಾಳ ರೈತರ ದನಕರುಗಳು ಟಿಬೇಟಿಯನ್ ರೈತನ ಜೋಳದ ಹೊಲಕ್ಕೆ ಮೇಯಲು ಹೋಗಿದ್ದವು. ಈ ವೇಳೆ ಟಿಬೇಟಿಯನ್ ರೈತ ಕಿಟುಪ್ ದನಕರುಗಳ ಮೇಲೆ ಎರ್ರಾಬಿರ್ರಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಕೊಂಬು, ಬಾಲ, ಕಾಲು ಹೀಗೆ ದನಕರಗಳ ಅಂಗಾಂಗಗಳಿಗೆ ಮಚ್ಚಿನೇಟು ಬಿದ್ದಿದೆ. ಗಾಯಗೊಂಡ ದನಕರುಗಳ ಮೂಕರೋಧನೆ ಕಲ್ಲು ಹೃದಯವಿರುವ ಮನುಷ್ಯರ ಕಣ್ಣಲ್ಲೂ ನೀರು ತರಿಸುವಂತಿದೆ. ಹಸು, ಎತ್ತುಗಳು ನಡೆಯಲಾರದೆ ಹೊಲದಲ್ಲೇ ಕುಸಿದು ಬೀಳುತ್ತಿವೆ. ಜೀವನೋಪಾಯಕ್ಕಾಗಿ ದನಕರುಗಳನ್ನೇ ಅವಲಂಬಿಸಿರುವ ಗುಂಡಿಮಾಳ ರೈತರು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ತಿ ಕಾವಲಿಗೆ ತಂತ್ರಜ್ಞಾನ‌ದ ಮೂಲಕ‌ ಕಡಿವಾಣ; ಲ್ಯಾಂಡ್ ಬೀಟ್ ಆ್ಯಪ್ ಸಿದ್ಧಗೊಳಿಸಿದ ಸರ್ಕಾರ

ವಿದ್ಯುತ್ ತಂತಿ ತಗುಲಿ ಎಮ್ಮೆಗಳ ಸಾವು

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ನಾಲ್ಕು ಎಮ್ಮೆಗಳು ಹಾಗೂ ಒಂದು ಕೋಣ ಮೃತಪಟ್ಟಿದೆ. ಮಲ್ಹಾರ ಗ್ರಾಮದ ಸಾಬಣ್ಣ ಎಂಬುವರ ಜಮೀನಿನಲ್ಲಿ ಘಟನೆ ನಡೆದಿದ್ದು ಎರಡು ಲಕ್ಷ ಮೌಲ್ಯದ ಎಮ್ಮೆಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಗ್ರಾಮದ ಆಂಜನೇಯ, ಹನುಮಂತ, ಭೀಮ್ಮಪ್ಪ ಹಾಗೂ ದೊಡ್ಡಪ್ಪ ಎಂಬ ರೈತರಿಗೆ ಸೇರಿದ ಎಮ್ಮೆಗಳು ಮೃತಪಟ್ಟಿವೆ. ವಿದ್ಯುತ್ ತಂತಿ ಜೋತು ಬಿದ್ದ ಬಗ್ಗೆ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದ್ರು ನಿರ್ಲಕ್ಷ್ಯ ತೋರಿದ್ದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?