AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಚಾಮರಾಜನಗರ ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ರಾಮಯ್ಯನ ಪೋಡಿ ಎಂಬಲ್ಲಿ ಹುಲಿ ದಾಳಿಯೊಂದು ನಡೆದಿದೆ. ಹುಲಿ ದಾಳಿಯಲ್ಲಿ ಗಾಯಗೊಂಡ ರವಿ ಎಂಬುವರನ್ನು ಚಾಮರಾಜನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ದಾಳಿ ನಡೆದ ಸ್ಥಳದಲ್ಲಿ ವಾಸಿಸುವ ಮೂರು ಕುಟುಂಬಗಳನ್ನು ಸಮೀಪದ ಆಶ್ರಮ ಶಾಲೆಯಲ್ಲಿ ತಾತ್ಕಾಲಿಕವಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ.

ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ
ಹುಲಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Jun 10, 2025 | 5:05 PM

Share

ಚಾಮರಾಜನಗರ, ಜೂನ್​ 10: ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿ ಮೇಲೆ ಹುಲಿ (Tiger) ದಾಳಿ ಮಾಡಿರುವ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿರುವ ರಾಮಯ್ಯನ ಪೋಡಿ ಎಂಬಲ್ಲಿ ನಡೆದಿದೆ. ಹುಲಿ ದಾಳಿಯಿಂದ ರವಿ ಎಂಬುವರ ತಲೆ, ಕೈ, ಕಾಲಿಗೆ ಗಾಯವಾಗಿದೆ. ಗಾಯಗೊಂಡಿರುವ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಭೋದನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಬ್ಬಕೆಂದು ರವಿ ಚಿಕ್ಕಮ್ಮನ ಮನೆಗೆ ಬಂದಿದ್ದರು. ಸೋಮವಾರ (ಜೂ.09) ರಾತ್ರಿ ಮೂತ್ರ ವಿಸರ್ಜನೆಗೆ ಮನೆಯಿಂದ ಹೊರ ಬಂದಾಗ ಹುಲಿ ದಾಳಿ ಮಾಡಿದೆ. ಅದೃಷ್ಟವಶಾತ್ ರವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮಯ್ಯನ ಪೋಡಿನಲ್ಲಿ ಹುಲಿ ದಾಳಿಯಿಂದ ರವಿ ಎಂಬುವರು ತೀವ್ರ ಸ್ವರೂಪವಾಗಿ ಗಾಯಗೊಂಡಿದ್ದಾರೆ. ಹುಲಿ ದಾಳಿ ನಡೆಸಿದ ಸ್ಥಳದಲ್ಲಿ ಮೂರು ಕುಟುಂಬಗಳಿವೆ. ಅವರನ್ನು ಸಮೀಪದ ಆಶ್ರಮ ಶಾಲೆಯಲ್ಲಿ ಆಶ್ರಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
ಚಾಮರಾಜನಗರದಲ್ಲಿ ಅತಿ ಶೀಘ್ರದಲ್ಲಿ ಕಾನೂನು ಕಾಲೇಜು ಆರಂಭ
Image
ಅಕ್ರಮ ಸಂಬಂಧ: ಪತ್ನಿಯನ್ನು ಪೊಲೀಸ್ ಠಾಣೆಯ ಸಮೀಪವೇ ಕೊಂದ ಪತಿ
Image
ಚಾಮರಾಜನಗರ: ಗ್ಯಾಸ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
Image
ಬಂಡೀಪುರದಲ್ಲಿ ಉದ್ಘಾಟನೆಗೆ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ

ಇತ್ತೀಚಿಗೆ ಬೆಂಗಳೂರಿನ ತಲಘಟ್ಟಪುರ ಮತ್ತು ಮಲ್ಲಸಂದ್ರ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಓಡಾಡಿದ್ದರ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಮಾಹಿತಿ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದರು. ಚಿರತೆ ಪತ್ತೆಹಚ್ಚಲು ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೈದು ಕಡೆ‌ ಕ್ಯಾಮರಾ ಅಳವಡಿಸಿದ್ದರು.

ಇದನ್ನೂ ಓದಿ: ವರ್ಷದ ಮೊದಲ ಮಳೆಗೆ ಬಂಡೀಪುರ ಹಸಿರುಮಯ: ಕೆರೆಗಳು ಭರ್ತಿ, ಸಫಾರಿಗೆ ಒಳ್ಳೆ ಸಮಯ

ಇನ್ನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚಿಕ್ಕ ತಿರುಪತಿ ಗ್ರಾಮ ಪಂಚಾಯತ್​ನ ಚಿಕ್ಕತಿರುಪತಿ, ಆಲಂಬಾಡಿ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಓಡಾಟದಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿತ್ತು, ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಆಗಾಗ ಚಿರತೆ ಪ್ರತ್ಯಕ್ಷವಾಗುತ್ತಿತ್ತು. ನಾಯಿ, ಹಸುಗಳ ಮೇಲೆ ದಾಳಿ ಮಾಡುತ್ತಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ