ಮಲೆ ಮಹದೇಶ್ವರ ವನ್ಯಧಾಮದಲ್ಲಿ ಸಫಾರಿ ಆರಂಭ: ಸಫಾರಿ ಸಮಯ, ದರ ವಿವರ ಇಲ್ಲಿದೆ

Male Mahadeshwara Wildlife Safari: ಪರಿಸರ ಪ್ರವಾಸೋದ್ಯಮ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಮತ್ತೊಂದು ವನ್ಯಜೀವಿ ಸಫಾರಿ ಆರಂಭಗೊಂಡಿದೆ. ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗಾಗಲೇ ಮೂರು ಸಫಾರಿ ಕೇಂದ್ರಗಳಿದ್ದು, ಇದೀಗ ನಾಲ್ಕನೇ ಸಫಾರಿ ಕೇಂದ್ರ ಆರಂಭವಾಗಿದೆ. ಹಾಗಾದ್ರೆ, ಯಾವುದು ಈ ಸಫಾರಿ? ಸಫಾರಿ ಸಮಯ ಹಾಗೂ ಸಫಾರಿ ಶುಲ್ಕ ವಿವರ ಈ ಕೆಳಗಿನಂತಿದೆ.

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಸಫಾರಿ ಆರಂಭ: ಸಫಾರಿ ಸಮಯ, ದರ ವಿವರ ಇಲ್ಲಿದೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 02, 2023 | 4:53 PM

ಚಾಮರಾನಗರ, (ಡಿಸೆಂಬರ್ 02) ಚಾಮರಾಜನಗರ (Chamarajanagar) ಜಿಲ್ಲೆಯ ಬಂಡೀಪುರ ಹಾಗು ಬಿ‌ಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ಇದೆ. ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗಾಗಲೇ ಬಂಡೀಪುರ, ಕೆ.ಗುಡಿ, ಗೋಪಿನಾಥಂನಲ್ಲಿ ವನ್ಯಜೀವಿ ಸಫಾರಿ ಇದ್ದು, ಇದರ ಜೊತೆ  ಇಂದಿನಿಂದ ಮತ್ತೊಂದು ಮಲೆ ಮಹದೇಶ್ವರ ವನ್ಯಜೀವಿಧಾಮ (Male Mahadeshwara Wildlife Safari) ವ್ಯಾಪ್ತಿಯಲ್ಲಿ ಪಿ‌.ಜಿ.ಪಾಳ್ಯ ಸಮೀಪ ಸಫಾರಿ ಆರಂಭಗೊಂಡಿದೆ.

ಇಂದು(ಡಿಸೆಂಬರ್ 02) ಹನೂರು ಶಾಸಕ ಎಂ.ಆರ್.ಮಂಜುನಾಥ್ ಅವರು ಮಹದೇಶ್ವರ ವನ್ಯಧಾಮದ ಸಫಾರಿಗೆ ಚಾಲನೆ ನೀಡಿದರು. ಇದರೊಂದಿಗೆ ಇದು ಚಾಮರಾಜನಗರ ಜಿಲ್ಲೆಯ ನಾಲ್ಕನೇ ಸಫಾರಿ ಕೇಂದ್ರವಾಗಿದೆ. ಈಗಾಗಲೇ ಬಂಡೀಪುರ, ಬಿಆರ್​ಟಿಯ ಕೆ.ಗುಡಿಯಲ್ಲಿ ಸಫಾರಿ ವ್ಯವಸ್ಥೆ ಇದೆ. ಹಾನೂರು ತಾಲೂಕಿನ ಕಾವೇದಿ ವನ್ಯಧಾಮದ ಗೋಪಿನಾಥಂನಲ್ಲಿ ಪ್ರಯೋಗಿಕವಾಗಿ ಸಫಾರಿ ಆರಂಭವಾಗಿದೆ. ಇದರ ಬೆನ್ನಲ್ಲೇ ಇದೀಗ ಮಲೆ ಮಹದೇಶ್ವರ ವನ್ಯಧಾಮದಲ್ಲೂ ಸಫಾರಿ ಆರಂಭವಾಗಲಿದ್ದು, ಹುಲಿ, ಚಿರತೆ ಆನೆ, ಕಾಡೆಮ್ಮೆ, ಜಿಂಕೆ, ವೈವಿಧ್ಯಮಯ ಪಕ್ಷಿಗಳು ಸೇರಿದಂತೆ ಎಲ್ಲಾ ಪ್ರಾಣಿಗಳನ್ನು ಇನ್ಮುಂದೆ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

ಸಫಾರಿ ಸಮಯ ಮತ್ತು ದರ

ಪ್ರವಾಸಿಗರಿಗೆ ಬೆಳಿಗ್ಗೆ ಮತ್ತು ಸಂಜೆ ಸಫಾರಿ ಸೌಲಭ್ಯ ಇದ್ದು, ಬೆಳಿಗ್ಗೆ 6 ರಿಂದ 9 ಗಂಟೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆಯವರೆಗೆ ಸಫಾರಿ ಸಮಯ ನಿಗದಿಪಡಿಸಲಾಗಿದೆ. ಇನ್ನು ವಯಸ್ಕರಿಗೆ 400 ರೂ. ಹಾಗೂ ಮಕ್ಕಳಿಗೆ 200 ರೂಪಾಯಿ ಸಫಾರಿ ದರ ನಿಗದಿಗೊಳಿಸಲಾಗಿದೆ. ಇದರ ಜೊತೆ ವಾಹನ ಪ್ರವೇಶಕ್ಕೆ 100 ಶುಲ್ಕ ಫಿಕ್ಸ್ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್