AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಕಾಲಕ್ಕೆ ತಾಯಿ-ಮಕ್ಕಳ ದರ್ಶನ, ಸಫಾರಿಗೆ ಬಂದವರು ಫುಲ್ ಖುಷ್

ಬಿಳಿಗಿರಿ ರಂಗನಾಥ ಮೀಸಲು ಹುಲಿ ಸಂರಕ್ಷಿತಾರಣ್ಯದಲ್ಲಿ ಒಟ್ಟೊಟ್ಟಿಗೆ ಮೂರು ಹುಲಿಗಳು ಸಫಾರಿಗೆ ಬಂದವರ ಕಣ್ಣಿಗೆ ಬಿದ್ದಿವೆ. ಒಂದು ತಾಯಿ ಎರಡು ಮರಿಗಳನ್ನ ನೋಡಿ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಸಫಾರಿ ರಸ್ತೆಯಲ್ಲಿ ನಿಂತಿದ್ದ ಮಳೆಯ ನೀರನ್ನು ತಾಯಿ ಹುಲಿ ಕುಡಿದ ದೃಶ್ಯ ರೋಚಕವಾಗಿದ್ದು ಪ್ರವಾಸಿಕರು ತಮ್ಮ ಕ್ಯಾಮೆರಾ ಕಣ್ಣುಗಳ ಮೂಲಕ ಸೆರೆ ಹಿಡಿದಿದ್ದಾರೆ.

ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಕಾಲಕ್ಕೆ ತಾಯಿ-ಮಕ್ಕಳ ದರ್ಶನ, ಸಫಾರಿಗೆ ಬಂದವರು ಫುಲ್ ಖುಷ್
ಸಫಾರಿಗೆ ಬಂದವರಿಗೆ ಹುಲಿಗಳ ದರ್ಶನ
TV9 Web
| Edited By: |

Updated on: Aug 31, 2021 | 11:59 AM

Share

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ಹುಲಿಗಳನ್ನು ನೋಡಲೆಂದೇ ಪ್ರವಾಸಿಗರು ಸಫಾರಿ ಕಡೆ ಮುಖ ಮಾಡುತ್ತಾರೆ. ಆದರೆ, ಕೆಲವೊಮ್ಮೆ ಸಫಾರಿಗೆ ಬಂದವರಿಗೆ ದರ್ಶನ ಭಾಗ್ಯ ಕರುಣಿಸದೇ ಹುಲಿಗಳು ಮರೆಯಾಗಿರುತ್ತವೆ. ಪ್ರವಾಸಿಗರು ನಿರಾಶೆಯಿಂದ ತೆರಳಿದಾ ಅದೆಷ್ಟೂ ಸಂಗತಿಗಳು ನಡೆದಿವೆ. ಆದರೆ, ಇಂದು ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಮೂರು ಹುಲಿಗಳ ದರ್ಶನವಾಗಿದೆ.

ಬಿಳಿಗಿರಿ ರಂಗನಾಥ ಮೀಸಲು ಹುಲಿ ಸಂರಕ್ಷಿತಾರಣ್ಯದಲ್ಲಿ ಒಟ್ಟೊಟ್ಟಿಗೆ ಮೂರು ಹುಲಿಗಳು ಸಫಾರಿಗೆ ಬಂದವರ ಕಣ್ಣಿಗೆ ಬಿದ್ದಿವೆ. ಒಂದು ತಾಯಿ ಎರಡು ಮರಿಗಳನ್ನ ನೋಡಿ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಸಫಾರಿ ರಸ್ತೆಯಲ್ಲಿ ನಿಂತಿದ್ದ ಮಳೆಯ ನೀರನ್ನು ತಾಯಿ ಹುಲಿ ಕುಡಿದ ದೃಶ್ಯ ರೋಚಕವಾಗಿದ್ದು ಪ್ರವಾಸಿಕರು ತಮ್ಮ ಕ್ಯಾಮೆರಾ ಕಣ್ಣುಗಳ ಮೂಲಕ ಸೆರೆ ಹಿಡಿದಿದ್ದಾರೆ.

ಹುಲಿಗಳ ಚಲನ, ವಲನಗಳನ್ನು ಕಣ್ತುಂಬಿಸಿಕೊಳ್ಳುವ ಸದಾವಕಾಶ ಪ್ರವಾಸಿಗರಿಗೆ ಇಂದು ಸಿಕ್ಕಿದೆ. ಬಿಆರ್ಟಿ ವನ್ಯಧಾಮದಲ್ಲಿ 50 ಹೆಚ್ಚು ಹೆಚ್ಚು ಹುಲಿಗಳಿವೆ ಎಂದು ಗಣತಿಯಿಂದ ತಿಳಿದಿದೆ. ಆದರೆ, ಸಫಾರಿಗೆ ಬಂದವರಿಗೆ ಆ ಹುಲಿಗಳ ದರ್ಶನ ಸಿಗುವುದು ತುಂಬಾ ವಿರಳ. ಸಿಕ್ಕರೂ ಒಂದು ಹುಲಿ ಮಾತ್ರ. ಪರಿಸ್ಥಿತಿ ಹೀಗಿದ್ದಾಗ ಇಂದು ಸಫಾರಿಗೆ ಹೋದವರಿಗೆ ಮೂರು ಹುಲಿಗಳ ದರ್ಶನ ಸಿಕ್ಕಿದೆ. ಅದರಲ್ಲೂ ಹುಲಿ ಮರಿಗಳನ್ನು ನೋಡಿ ಪ್ರವಾಸಿಗರು ಥ್ರಿಲ್ ಆಗಿದ್ದಾರೆ.

tigers

ತಾಯಿ ಹುಲಿ ನೀರು ಕುಡಿಯುತ್ತಿರುವುದು

ಇದನ್ನೂ ಓದಿ: ಏಷ್ಯಾದ ಅತಿದೊಡ್ಡ ಕರಡಿ ಧಾಮದಲ್ಲಿ ಸಫಾರಿ ಆರಂಭ; ಪ್ರವಾಸಿಗರು ಫುಲ್ ಖುಷ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು