AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಗುಡಿ ನಿಸರ್ಗ ಪ್ರವಾಸಿ ತಾಣಕ್ಕೆ ಮತ್ತಷ್ಟು ಮೆರಗು, ವೀಕ್ಎಂಡ್​ನಲ್ಲಿ ಹೆಚ್ಚಾಗುತ್ತಿದೆ ಪ್ರವಾಸಿಗರ ದಂಡು

ಅದೇ ಆಫೀಸ್.. ಅದೇ ಟೆನ್ಷನ್.. ಅದೇ ಹಳೇ ಮುಖಗಳು.. ಮನೆಯಲ್ಲೂ ಬೋರಿಂಗ್.. ಎಲ್ಲಾದ್ರು ಹೊರಗಡೆ ಹೋಗೋಣ ಅಂದ್ರೆ ಆಗ್ತಿಲ್ಲ. ಒಳ್ಳೆ ಪ್ಲೇಸ್ ಸೆಲೆಕ್ಟ್ ಮಾಡೋಕೂ ಆಗ್ತಿಲ್ಲ.. ಏನ್ ಮಾಡೋದು ಅಂತಾ ಥಿಂಕ್ ಮಾಡ್ತಿದ್ದವರು, ಅದೊಂದು ಪ್ಲೇಸ್ಗೆ ಎಂಟ್ರಿ ಕೊಟ್ರಷ್ಟೇ. ದಿನಪೂರ್ತಿ ಕಾಲ ಕಳೆದು ಖುಷಿ ಪಡ್ತಿದ್ದಾರೆ.

ಕೆ.ಗುಡಿ ನಿಸರ್ಗ ಪ್ರವಾಸಿ ತಾಣಕ್ಕೆ ಮತ್ತಷ್ಟು ಮೆರಗು, ವೀಕ್ಎಂಡ್​ನಲ್ಲಿ ಹೆಚ್ಚಾಗುತ್ತಿದೆ ಪ್ರವಾಸಿಗರ ದಂಡು
ಕೆ.ಗುಡಿ ನಿಸರ್ಗ ಪ್ರವಾಸಿ ತಾಣ
TV9 Web
| Edited By: |

Updated on: Sep 12, 2021 | 7:27 AM

Share

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಾಥ ಬೆಟ್ಟದ ಕೆ.ಗುಡಿ. ಬಿಳಿಗಿರಿ ರಂಗನಾಥ ಬೆಟ್ಟ ಧಾರ್ಮಿಕ ಕೇಂದ್ರವಾದ್ರೆ, ಕೆ.ಗುಡಿ ನಿಸರ್ಗ ಪ್ರವಾಸಿ ತಾಣ. ನಿತ್ಯ ಹಾಗೂ ಅರೆ ನಿತ್ಯ ಹರಿದ್ವರ್ಣ ಸಸ್ಯ ಸಂಕುಲಗಳ ಆಗರ. ಹೀಗಾಗಿಯೇ ಇಲ್ಲಿಗೆ ಪ್ರವಾಸಿಗರು ಆಗಮಿಸಿ ಕಾಲ ಕಳೀತ್ತಿದ್ದಾರೆ. ಇಲ್ಲಿನ ಅರಣ್ಯ ಪ್ರದೇಶಕ್ಕೆ ಎಂಟ್ರಿ ಕೊಡ್ತಿದ್ದಂತೆ ಹಚ್ಚ ಹಸಿರಾದ ಕುರುಚಲು ಕಾಡುಗಳು ಕಾಮಾನಿನಂತೆ ಬಾಗಿ ಸ್ವಾಗತ ಕೋರುತ್ತವೆ. ಬಳಿಕ ಕೆ.ಗುಡಿ ಹತ್ತಿರವಾಗುತ್ತಿದ್ದಂತೆ ಬೆಟ್ಟಗಳು ಕಣ್ಮನ ಸೆಳೆಯುತ್ತವೆ. ಹೀಗೆ ಚಾಮರಾಜನಗರದಿಂದ 35 ಕಿಲೋಮೀಟರ್ ಹೋಗುತ್ತಿದ್ದಂತೆ ಸಿಗುವ ಕೆ.ಗುಡಿ ಮಕ್ಕಳ ಅಚ್ಚು ಮೆಚ್ಚಿನ ಹಾಟ್ ಸ್ಪಾಟ್. ಆನೆ ಶಿಬಿರವೂ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಇವುಗಳ ಮಧ್ಯೆ ಕೆ.ಗುಡಿಯಲ್ಲಿ ಅರಣ್ಯ ಇಲಾಖೆ ಸಫಾರಿ ವ್ಯವಸ್ಥೆ ಮಾಡಿದ್ದು, ವೀಕ್ಎಂಡ್ ವೇಳೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಅದು ಕೂಡ ವೀಕ್ಎಂಡ್ ತೆರವಾಗ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಡಬಲ್ ಆಗ್ತಿದೆ.

ಹಚ್ಚ ಹಸಿರಾದ ಅರಣ್ಯ ಪ್ರದೇಶದಲ್ಲಿ ಮುಂಜಾನೆ ವೇಳೆ ಸಫಾರಿ ಹೊರಟ್ರೆ ಮನಸ್ಸು ಮುದಗೊಳ್ಳುತ್ತೆ. 800 ಬಗೆಯ ಗಿಡಮರಗಳ ವೀಕ್ಷಣೆ, 27 ಬಗೆಯ ಸಸ್ತನಿಗಳು, 260ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, 22 ಬಗೆಯ ಸರಿಸೃಪಗಳು ಪ್ರವಾಸಿಗರನ್ನ ಆಕರ್ಷಿಸುತ್ತಿವೆ. ಜೊತೆಗೆ ಸಫಾರಿ ಮತ್ತು ಪ್ರಯಾಣದ ವೇಳೆ ಆನೆ, ಹುಲಿ, ಕರಡಿ, ಜಿಂಕೆ, ಕಾಡೆಮ್ಮೆಗಳು ಕಾಣ ಸಿಗುತ್ತವೆ. ಇದೇ ಕಾರಣಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸ್ತಿದ್ದಾರೆ.

ಒಟ್ನಲ್ಲಿ, ತಾಣಕ್ಕೆ ಕಾರಿನಲ್ಲಿ ಬರಲು ಅವಕಾಶ ಇದೆ. ಕಾರು ಇಲ್ಲದವರಿಗೆ ಸರ್ಕಾರಿ ಬಸ್ ವ್ಯವಸ್ಥೆ ಮಾಡ್ಲಾಗಿದೆ. ಹೀಗಾಗಿ ಪ್ರವಾಸಿಗರು ಕೆ.ಗುಡಿಗೆ ಆಗಮಿಸಿ ಖುಷಿಯಿಂದ ಕಾಲ ಕಳೀತಿದ್ದಾರೆ.

Chm K Gudi

ಕೆ.ಗುಡಿ ನಿಸರ್ಗ ಪ್ರವಾಸಿ ತಾಣ

Chm K Gudi

ಕೆ.ಗುಡಿ ನಿಸರ್ಗ ಪ್ರವಾಸಿ ತಾಣ

Chm K Gudi

ಕೆ.ಗುಡಿ ನಿಸರ್ಗ ಪ್ರವಾಸಿ ತಾಣ

ಇದನ್ನೂ ಓದಿ: ಇಂಗ್ಲೆಂಡ್-ಇಂಡಿಯ ನಡುವಿನ ಕೊನೆ ಟೆಸ್ಟ್ ರದ್ದಾಗಿದ್ದು ಐಪಿಎಲ್​ಗೋಸ್ಕರವೇ ಹೊರತು ಬೇರೆ ಯಾವ ಕಾರಣಕ್ಕೂ ಅಲ್ಲ: ಮೈಕೆಲ್ ವಾನ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ