AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 ವರದಿ ಇಂಪ್ಯಾಕ್ಟ್: ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮಗಳಿಗೆ ಆ್ಯಂಬುಲೆನ್ಸ್ ಸೇವೆ

ಹನೂರು ತಾಲ್ಲೂಕಿನ ತುಳಸಿಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಜನರು ಡೋಲಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು. ಈ ಬಗ್ಗೆ ಏಪ್ರಿಲ್​ 2ನೇ ತಾರೀಕಿನಂದು ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಚಾಮರಾಜನಗರ ಜಿಲ್ಲಾಡಳಿತ ಮತ್ತು ಮಲೆ ಮಹಾದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಎಚ್ಚೆತ್ತಿವೆ.

Tv9 ವರದಿ ಇಂಪ್ಯಾಕ್ಟ್: ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮಗಳಿಗೆ ಆ್ಯಂಬುಲೆನ್ಸ್ ಸೇವೆ
ಆಂಬ್ಯುಲೆನ್ಸ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on: Apr 19, 2025 | 4:59 PM

ಚಾಮರಾಜನಗರ, ಏಪ್ರಿಲ್​ 19: ಹನೂರು (Hanur) ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Male Mahadeshwara Hill) ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಜನರು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ್ದರ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬಳಿಕ ಜಿಲ್ಲಾಡಳಿತ ಮತ್ತು ಮಹದೇಶ್ವರ ಬೆಟ್ಟ ಪ್ರಾಧಿಕಾರ ಎಚ್ಚೆತ್ತಿವೆ.

ಪ್ರಾಧಿಕಾರ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮದ ಜನರಿಗೆ ಅನುಕಲವಾಗಲೆಂದು ಆರೋಗ್ಯ ಇಲಾಖೆಗೆ 18 ಲಕ್ಷ ರೂ. ಮೌಲ್ಯದ ಆ್ಯಂಬುಲೆನ್ಸ್ ಕೊಡುಗೆ ನೀಡಿದೆ.

ಏನಿದು ಪ್ರಕರಣ

ಹನೂರು ತಾಲೂಕಿನ ತುಳಸಿಕೆರೆ ಗ್ರಾಮಕ್ಕೆ ತೆರಳಲು ಸೂಕ್ತ ರಸ್ತೆ ಇಲ್ಲದ ಕಾರಣ ಗ್ರಾಮಕ್ಕೆ ಯಾವ ವಾಹನಗಳು ಬರುವುದಿಲ್ಲ. ಇದರಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಡೋಲಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ಇನ್ನೂವರೆಗೂ ಹನೂರು ತಾಲೂಕಿನ 18 ಗ್ರಾಮಗಳಿಗೆ ವಿದ್ಯುತ್ ಸಂಪರ್ಕವು ದೊರೆತಿಲ್ಲ, ರಸ್ತೆ ಸಂಪರ್ಕ ಇಲ್ಲ.

ಇದನ್ನೂ ಓದಿ
Image
ನಿಮ್ಮ ಜಾಗ ಏನೂ ಆಗಲ್ಲ, ಭಯ ಬೇಡ: ಗ್ರಾಮಸ್ಥರಿಗೆ ರಾಜಮಾತೆ ಪ್ರಮೋದಾದೇವಿ ಅಭಯ
Image
ಮಲೆಮಹದೇಶ್ವರ ದೇವಸ್ಥಾನದ ಗೋಪುರವೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
Image
ಪ್ರಮೋದಾದೇವಿ ಪತ್ರ ಬೆನ್ನಲ್ಲೇ: ಊರೇ ಖಾಲಿ ಮಾಡಬೇಕಾದ ಭೀತಿಯಲ್ಲಿ ಜನರು
Image
ಚಾಮರಾಜನಗರದ 4500 ಎಕರೆ ಭೂಮಿ ನಮ್ಮ ಸ್ವತ್ತು, ಪ್ರಮೋದಾದೇವಿ ಪತ್ರ

ತುಳಸಿಕೆರೆ ಗ್ರಾಮದ ನಿವಾಸಿ ಪುಟ್ಟ ಎಂಬುವರು ಅನಾರೋಗ್ಯದಿಂದ ನಿತ್ರಾಣಗೊಂಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಪುಟ್ಟನನ್ನ ಡೋಲಿಯಲ್ಲಿ ಹೊತ್ತುಕೊಂಡು ಹೋಗಿ ತಮಿಳುನಾಡಿನ ಕೋಳತ್ತೂರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಕಾಡಂಚಿನ ಗ್ರಾಮವಾದ ಕಾರಣ ವಿದ್ಯಾರ್ಥಿಗಳು ವಿದ್ಯಾಬ್ಯಾಸಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಬೇಕು. 4-5 ಕಿಮೀ ಕಾಡಿನ ದುರ್ಗಮ ಮಾರ್ಗದಲ್ಲಿ ಸಾಗುವಾಗ ಕತ್ತೆ ಕಿರುಬ, ಕರಡಿ ಮತ್ತು ಆನೆಗಳ ಕಾಟ ಇರುತ್ತದೆ. ಇಷ್ಟೆಲ್ಲ ಸಮಸ್ಯೆಯಿದ್ದರೂ ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ದಿವ್ಯ ನಿರ್ಲಕ್ಷಕ್ಕೆ ಈ ಕಾಡಿನ ಮಕ್ಕಳು ದಿನನಿತ್ಯ ನರಕ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಪ್ಪನ ಬೆಟ್ಟದಲ್ಲಿ ಸಂಪುಟ ಸಭೆ: ಹಲವು ನಿರೀಕ್ಷೆ

5ಜಿ ಯುಗದಲ್ಲಿ ಸೆಕೆಂಡ್​ನಲ್ಲಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಸಂಪರ್ಕ ಬೆಳೆಸುವ ಈ ಯುಗದಲ್ಲಿ ಇನ್ನು ಮೂಲಭೂತ ಸೌಕರ್ಯ ಸಿಗದೆ ಶಿಲಾ ಯುಗದ ರೀತಿ ಇಲ್ಲಿನ ಜನರು ಬದುಕ್ತಯಿರುವ ನಿಜಕ್ಕೂ ದುರಂತವೆ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ