AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು

ಚಾಮರಾಜನಗರದಲ್ಲಿ ಲಂಚ ಪಡೆಯುವಾಗ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು ಜಿಎಸ್​ಟಿ ಹಣವನ್ನು ತಮಗೆ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಚಾಮರಾಜನಗರ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು
ಎಸಿಬಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 04, 2021 | 7:13 PM

Share

ಚಾಮರಾಜನಗರ: ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್ಸ್ಪೆಕ್ಟರ್​ಗಳು ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ರವಿಕುಮಾರ್ ಮತ್ತು ಅವಿನಾಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಚಾಮರಾಜನಗರ ತಾಲೂಕಿನ ನಾಗವಳ್ಳಿ ಆಟೋಪಾರ್ಟ್ಸ್ ಅಂಗಡಿ ಮಾಲೀಕ ತೌಸಿಫ್ ಎಂಬುವವರಿಂದ ಲಂಚ ಪಡೆಯುವ ವೇಳೆಗೆ ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ. ಜಿಎಸ್​ಟಿ ಹಣ ಕಟ್ಟದೆ ತಮಗೆ ನೀಡುವಂತೆ ಅಧಿಕಾರಿಗಳು ಹೇಳಿದ್ದರು. ನಂತರ 7 ಸಾವಿರ ರೂಪಾಯಿ ಹಣ ಪಡೆದು ಕೊಂಡಿದ್ದರು. ಅದರಲ್ಲಿ ರವಿಕುಮಾರ್ 2 ಸಾವಿರ, ಅವಿನಾಶ್ 5 ಸಾವಿರ ಹಂಚಿಕೆ ಮಾಡಿಕೊಂಡಿದ್ದರು. ಇದೀಗ ಈರ್ವರೂ ಎಸಿಬಿ ಬಲೆಗೆ ಬಿದ್ದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಸಂತ್ರಸ್ತನಿಗೆ ಪರಿಹಾರ ಒದಗಿಸಲು ಬೇಡಿಕೆ ಇಟ್ಟಿದ್ದ ಅಧಿಕಾರಿ ಎಸಿಬಿ ಬಲೆಗೆ ಧಾರವಾಡ: ಮಳೆಯಿಂದ ಮನೆ ಕಳೆದುಕೊಂಡಿದ್ದ ಸಂತ್ರಸ್ತರೋರ್ವರಿಗೆ ಪರಿಹಾರ ಒದಗಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಇತ್ತೀಚೆಗೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ನವಲಗುಂದ ಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಪ್ರದೀಪ ಬಸವಂತಕರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿ. 2020ರ ಸೆಪ್ಟೆಂಬರ್‌ನಲ್ಲಿ ಮಳೆಯಿಂದಾಗಿ ಮಾಳಿ ಕುಟುಂಬ ಮನೆ ಕಳೆದುಕೊಂಡಿತ್ತು. ಈ ವೇಳೆ ಮನೆ ಹಾನಿ ಪರಿಹಾರ ಸಂಬಂಧ ₹ 15,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ₹ 5 ಸಾವಿರ ಮುಂಗಡ ಪಡೆದಿದ್ದ ಆರೋಪಿ, ನವಲಗುಂದ ಕಚೇರಿಯಲ್ಲಿಯೇ ₹ 10,000 ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದರು. ಪ್ರಕರಣದ ವಿಚಾರಣೆ ನಡೆಯುತ್ತಿದೆ.

 ಇದನ್ನೂ ಓದಿ:

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಆರು ಪಟ್ಟು ಹೆಚ್ಚಳ: ಭಾರತದಲ್ಲಿ ಹೆಚ್ಚಾಗುತ್ತಿದೆ ಆತಂಕ

ವಿಜಯಪುರ: ವಿದ್ಯುತ್ ಬಿಲ್ ಕಟ್ಟದ್ದಕ್ಕೆ ಮನೆಗೆ ಬಂದ ಹೆಸ್ಕಾಂ ಅಧಿಕಾರಿಗಳಿಗೆ ಮಚ್ಚು ತೋರಿಸಿದ ವ್ಯಕ್ತಿ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ