ಕಬ್ಬು ಕಟಾವು ವೇಳೆ ಚಿರತೆ ಮರಿಗಳು ಪ್ರತ್ಯಕ್ಷ, ಕೂಲಿಯವರು ಮಾಡಿದ್ದೇನು?

ಚಾಮರಾಜನಗರ: ತಾಳವಾಡಿಯ ದೊಡ್ಡಮುತ್ತಿನ ಕೆರೆ ಗ್ರಾಮದ ಬಳಿ ಕಬ್ಬು ಕಟಾವು ಮಾಡುವಾಗ ಗದ್ದೆಯಲ್ಲಿ ಚಿರತೆ ಮರಿಗಳು ಕಾಣಿಸಿಕೊಂಡಿವೆ. ಎರಡು ಚಿರತೆ ಮರಿಗಳನ್ನು ಕಂಡ ಕೂಲಿ ಕಾರ್ಮಿಕರು ಮೊದಲಿಗೆ ಗಾಬರಿಗೊಂಡಿದ್ದಾರೆ. ಬಳಿಕ ಚಿರತೆ ಮರಿಗಳನ್ನು ಎತ್ತಿಕೊಂಡು ಮುದ್ದಾಡಿದ್ದಾರೆ. ತಂಗರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳಗ್ಗೆ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು ಕಂಡುಬಂದಿವೆ. ಕೂಡಲೇ ಸತ್ಯಮಂಗಲಂ ಅರಣ್ಯಾಧಿಕಾರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆ ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ನಂತರ ಮರಿಗಳಿದ್ದ ಸ್ಥಳದಲ್ಲಿ ಚಿರತೆಗಾಗಿ ಬೋನು […]

ಕಬ್ಬು ಕಟಾವು ವೇಳೆ ಚಿರತೆ ಮರಿಗಳು ಪ್ರತ್ಯಕ್ಷ, ಕೂಲಿಯವರು ಮಾಡಿದ್ದೇನು?
ಸಾಧು ಶ್ರೀನಾಥ್​

Updated on: Dec 27, 2019 | 11:50 AM

ಚಾಮರಾಜನಗರ: ತಾಳವಾಡಿಯ ದೊಡ್ಡಮುತ್ತಿನ ಕೆರೆ ಗ್ರಾಮದ ಬಳಿ ಕಬ್ಬು ಕಟಾವು ಮಾಡುವಾಗ ಗದ್ದೆಯಲ್ಲಿ ಚಿರತೆ ಮರಿಗಳು ಕಾಣಿಸಿಕೊಂಡಿವೆ. ಎರಡು ಚಿರತೆ ಮರಿಗಳನ್ನು ಕಂಡ ಕೂಲಿ ಕಾರ್ಮಿಕರು ಮೊದಲಿಗೆ ಗಾಬರಿಗೊಂಡಿದ್ದಾರೆ. ಬಳಿಕ ಚಿರತೆ ಮರಿಗಳನ್ನು ಎತ್ತಿಕೊಂಡು ಮುದ್ದಾಡಿದ್ದಾರೆ.

ತಂಗರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳಗ್ಗೆ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು ಕಂಡುಬಂದಿವೆ. ಕೂಡಲೇ ಸತ್ಯಮಂಗಲಂ ಅರಣ್ಯಾಧಿಕಾರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆ ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ನಂತರ ಮರಿಗಳಿದ್ದ ಸ್ಥಳದಲ್ಲಿ ಚಿರತೆಗಾಗಿ ಬೋನು ಇಟ್ಟು ಕ್ಯಾಮರಾ ಅಳವಡಿಸಿದ್ದಾರೆ.

Published On - 11:41 am, Fri, 27 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us