Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಪ್ರತ್ಯೇಕ ಘಟನೆ: ಚಾಮರಾಜನಗರ, ಬೆಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ಹಲ್ಲೆ; ದೂರು ದಾಖಲು

ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಪುಂಡರು ಸವಾರರಿಗೆ ಹಲ್ಲೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ಚಾಮರಾಜನಗರ ಮತ್ತು ಬೆಂಗಳೂರಿನಲ್ಲಿ ನಡೆದಿವೆ.

ಎರಡು ಪ್ರತ್ಯೇಕ ಘಟನೆ: ಚಾಮರಾಜನಗರ, ಬೆಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ಹಲ್ಲೆ; ದೂರು ದಾಖಲು
ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು
Follow us
ವಿವೇಕ ಬಿರಾದಾರ
|

Updated on:Aug 08, 2023 | 12:28 PM

ಬೆಂಗಳೂರು: ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಪುಂಡರು ಸವಾರರಿಗೆ ಹಲ್ಲೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ಚಾಮರಾಜನಗರ (Chmarajnagar) ಮತ್ತು ಬೆಂಗಳೂರಿನಲ್ಲಿ (Bengaluru) ನಡೆದಿವೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಪುರದಲ್ಲಿ (Bandipur) ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಿಡಿಗೇಡಿಗಳ ಗುಂಪೊಂದು ಕಾರಿನಲ್ಲಿ ಬಂದು ದಂಪತಿ ಸಾಗುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ದಂಪತಿ ಇದ್ದ ಕಾರಿನ ಬಳಿ ಬಂದು, ಕಾರಿನಲ್ಲಿದ್ದ ಮಹಿಳೆಯ ಕೈಗಳನ್ನು ಹೊರಗೆ ಎಳೆದಿದ್ದಾರೆ. ಇದರಿಂದ ಮಹಿಳೆ ಗಾಯಗೊಂಡಿದ್ದಾರೆ. ಅಲ್ಲದೇ ಕಾರಿನ ಡ್ಯಾಶ್‌ಕ್ಯಾಮ್‌ ಅನ್ನು ಹಾನಿ ಮಾಡಲು ಯತ್ನಿಸಿದ್ದಾರೆ.

ಘಟನೆ ದೃಶ್ಯ ಕಾರಿನ ಡ್ಯಾಶ್​ಕ್ಯಾಮ್​​ನಲ್ಲಿ ರೆಕಾರ್ಡ್​ ಆಗಿದೆ. ಈ ವಿಡಿಯೋವನ್ನು ಥರ್ಡ್​​ ಐ ಎಂಬ ಟ್ವಿಟರ್​ ಖಾತೆ ಬಳೆಕೆದಾರರು ಆ.6 ರಂದು ಟ್ವೀಟ್ ​ಮಾಡಿದ್ದಾರೆ. “ನಾವು ದೂರು ಸಲ್ಲಿಸಲು ಬಯಸಿದ್ದೇವು. ಆದರೆ ನಾವು ತಮಿಳುನಾಡು ಗಡಿಗೆ ಹತ್ತಿರದಲ್ಲಿದ್ದರಿಂದ ಪೊಲೀಸರು ನಮಗೆ ಸಹಾಯ ಮಾಡಲಿಲ್ಲ. ದಯವಿಟ್ಟು ಈ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಿ. ಅವರು ದಂಪತಿಯನ್ನು ಅಡ್ಡಗಟ್ಟಲು ಕಾರಣವೇನು ? ಅಂತ ತಿಳಿಸಿ” ಎಂದು ಟ್ವೀಟ್​ ಮಾಡಿದ್ದಾರೆ.

ಪೋಸ್ಟ್ ವೈರಲ್​​ ಆಗುತ್ತಿದ್ದಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್​ ಮಾಡಿ ದಂಪತಿ ಗುಂಡ್ಲುಪೇಟೆ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡುವಂತೆ ಸೂಚಿಸಿದರು. ಅಲ್ಲದೇ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಅವರ ದೂರವಾಣಿ ನಂಬರ್​ ಅನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ಅದೇ ದಿನ ರಾತ್ರಿ 9.21ಕ್ಕೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ (SP) ಪದ್ಮಿನಿ ಸಾಹೂ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ.

ಎರಡನೇ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದಿದೆ. ಆ. 5 ರಂದು ವ್ಯಕ್ತಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್​​ನಲ್ಲಿ ಹಿಂಬಾಲಿಸಿಕೊಂಡ ಬಂದ ಕೆಲ ಯುವಕರು ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದಾರೆ. ನಂತರ ವಿಂಡ್‌ಶೀಲ್ಡ್ ಒಡೆಯಲು ಯತ್ನಿಸಿದ್ದಾರೆ ಎಂದು ನಾನು ವಾಚಿಂಗ್​ ಎಂಬುವರು ಟ್ವೀಟ್​ ಮಾಡಿದ್ದಾರೆ.

ಈ ಟ್ವೀಟ್​ ಗಮನಿಸಿದ ವೈಟ್​ಫೀಲ್ಡ್​ ಪೊಲೀಸರು ಕೆಲ ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವಿಷಯ ತಿಳಿದು ವೈಟ್​ಫಿಲ್ಡ್​​ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು NaNu Watching ಪೋಸ್ಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 7 August 23

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್