AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿ ಬಳಿ 2 ಹುಲಿಗಳ ಮೃತದೇಹ ಪತ್ತೆ

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳ ಮೃತದೇಹ ಪತ್ತೆಯಾಗಿವೆ. ಸ್ಥಳಕ್ಕೆ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಮೀಸಲು ಮತ್ತು ವನ್ಯಜೀವಿ ಅಭಯಾರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರ: ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿ ಬಳಿ 2 ಹುಲಿಗಳ ಮೃತದೇಹ ಪತ್ತೆ
ಮೃತ ಹುಲಿಗಳು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Dec 08, 2023 | 2:33 PM

Share

ಚಾಮರಾಜನಗರ, ಡಿಸೆಂಬರ್​ 08: ಕಳೆದ ಎರಡು ವಾರಗಳ ಹಿಂದೆ ಬಂಡೀಪುರದ ಮದ್ದೂರು ವಲಯ ವ್ಯಾಪ್ತಿಯಲ್ಲಿ 3 ವರ್ಷ ವಯಸ್ಸಿನ ಗಂಡು ಹುಲಿ (Tiger) ಮೃತಪಟ್ಟಿತ್ತು. ಇದು ಮಾಸುವ ಮುನ್ನವೇ, ಚಾಮರಾಜನಗರ (Chamrajnagar) ತಾಲೂಕಿನ ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳ ಮೃತದೇಹ ಪತ್ತೆಯಾಗಿವೆ. ಸ್ಥಳಕ್ಕೆ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಮೀಸಲು ಮತ್ತು ವನ್ಯಜೀವಿ ಅಭಯಾರಣ್ಯ (BRT) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಮೇಲೂರು ಸರ್ವೇ ನಂಬರ್ 107 ರ ಕರಿಕಲ್ಲು ಕ್ವಾರಿಯಿಂದ 15 ಮೀಟರ್​ ದೂರದಲ್ಲಿ ಹುಲಿಗಳು ಮೃತಪಟ್ಟಿವೆ. ಹುಲಿ ಸಾವಿನ ಸುದ್ದಿ ಅಧಿಕಾರಿಗಳಿಗೆ ನಿನ್ನೆ (ಡಿ.07) ರ ಸಂಜೆಯೇ ತಿಳಿದಿತ್ತು. ಆದರೂ ಕೂಡ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರಲಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳ ನಡೆ ಅನುಮಾನಕ್ಕೆ ಕಾರಣವಾಗಿದೆ. ಹುಲಿ ಮೃತದೇಹ ಚಿತ್ರೀಕರಣ ಮಾಡಲು ಅಧಿಕಾರಿಗಳು ಬಿಡದೆ, ಮರಣೋತ್ತರ ಪರೀಕ್ಷೆ ನಂತರ ಮಾಹಿತಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ.

ಹುಲಿಗಳ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ವಿಷ ಹಾಕಿ ಕೊಲ್ಲಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಇಲ್ಲವೇ ಪರಸ್ಪರ ಕಾದಾಡಿ ಮೃತಪಟ್ಟಿರುವ ಶಂಕೆ ಮೂಡಿದೆ. 15 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ವನ್ಯ ಮೃಗಗಳನ್ನ ಬೇಟೆಯಾಡಲು ಹೊಂಚು ಹಾಕಿದ್ದ ಕಾಡುಗಳ್ಳರ ಬಂಧನ

ದಿನ ಕಳೆದಂತೆ ಪ್ರಾಣಿಗಳನ್ನು ಬೇಟೆಯಾಡುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ವನ್ಯ ಮೃಗಗಳನ್ನು ಬೇಟೆಯಾಡಲು ಹೊಂಚು ಹಾಕಿದ್ದ ಇಬ್ಬರು ಕಾಡುಗಳ್ಳರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದಡಬಂಡಿ ಮಾದಯ್ಯ, ನಾಗ ತಂಬಡಿ ಬಂಧಿತರು.

ಆರೋಪಿಗಳು ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ದೇವರ ಮಡು ಅರಣ್ಯದಲ್ಲಿ ಉರುಳುಗಳನ್ನು ಹಾಕಿ ಕಡವೆ, ಜಿಂಕೆಯ ಶಿಕಾರಿಗಾಗಿ ಹೊಂಚು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಆರೋಪಿಗಳಾದ ದಡಬಂಡಿ ಮಾದಯ್ಯ, ನಾಗ ತಂಬಡಿಯನನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಬಂಧಿತರಿಂದ ಮಚ್ಚು, ಟಾರ್ಚ್ ಲೈಟ್ ಮತ್ತು ಹಗ್ಗವನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Fri, 8 December 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ