AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಉನ್ನತ ಮಟ್ಟದ ತಂಡವನ್ನು ರಚಿಸಿದೆ. ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದೆ.

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
ಹುಲಿಗಳ ಮೃತದೇಹ ದೊರೆತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಪರಿಶೀಲನೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jun 27, 2025 | 10:54 AM

Share

ಚಾಮರಾಜನಗರ, ಜೂನ್ 27: ಚಾಮರಾಜನಗರ (Chamarajnagara) ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು (Tiger) ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.

ಗ್ರಾಮಸ್ಥರ ವಿಚಾರಣೆ

ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.

ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ. ಹೀಗಾಗಿ, ಸತ್ತ ಹಸುವಿಗೆ ಯಾರೋ ವಿಷ ಸಿಂಪಡಿಸಿರುವ ಸಾಧ್ಯತೆ ಇದೆ. ಅದನ್ನು ತಿಂದು ಹುಲಿ ಮತ್ತು ಹುಲಿ ಮರಿಗಳು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ.

ಇದನ್ನೂ ಓದಿ
Image
ಕೆಆರ್​ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಭರ್ತಿ!
Image
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಮುಂಚೂಣಿಯಲ್ಲಿ ಈ ನಾಯಕರ ಹೆಸರು!
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
Image
ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವರ ಆದೇಶ

ಹೂಗ್ಯಂ ಅರಣ್ಯ ವಲಯದ ಮೀಣ್ಯಂ ಸಮೀಪ ಮಹದೇಶ್ವರ ಗುಡಿ ಬಯಲಿನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳ ಮೃತದೇಹಗಳು ಕಂಡುಬಂದಿದ್ದವು. ಬುಧವಾರ ಅರಣ್ಯಸಿಬ್ಬಂದಿ ಗಸ್ತಿನ ವೇಳೆ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು ಅನತಿ ದೂರದಲ್ಲಿ ಹಸುವೊಂದರ ಮೃತದೇಹವೂ ಕಂಡು ಬಂದಿತ್ತು.

ಇದನ್ನೂ ಓದಿ: ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ

ಐದು ಹುಲಿಗಳು ಒಮ್ಮಲೇ ಮೃತಪಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ತನಿಖೆಗೆ ಪಿಸಿಸಿಎಫ್ ನೇತೃತ್ವದಲ್ಲಿ ಉನ್ನತ ಮಟ್ಟದ ತಂಡ ರಚಿಸಿ ಗುರುವಾರ ಸಂಜೆ ಆದೇಶ ಹೊರಡಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿಷಪ್ರಾಶನದಿಂದ ಮೃತಪಟ್ಟಿದ್ದರೆ ಅದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಚಿವರು ಈಗಾಗಲೇ ಆದೇಶಿಸಿದ್ದಾರೆ. ಸದ್ಯ ಆರು ಮಂದಿಯ ತನಿಖಾ ತಂಡ ತನಿಖೆ ನಡೆಸುತ್ತಿದೆ. ಪಿಸಿಸಿಎಫ್ ರವಿ,ಎಪಿಸಿಸಿಎಫ್ ಶ್ರೀನಿವಾಸಲು,ಸಿಎಫ್ ಹೀರಾಲಾಲ್, ಎನ್​ಟಿಸಿಎ ಪ್ರತಿನಿಧಿ ಮಲ್ಲೇಶಪ್ಪ, ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹಾಗೂ ಮೈಸೂರು ಮೃಗಾಲಯದ ಪಶು ವೈದ್ಯಾಧಿಕಾರಿಕಾರಿ ಈ ತಂಡದಲ್ಲಿದ್ದಾರೆ. 14 ದಿನಗಳ ಒಳಗೆ ವರದಿ ಸಲ್ಲಿಸಲು ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ