AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಾಮರಾಜನಗರದ ಚೆನ್ನಪ್ಪನಪುರದಲ್ಲಿ ಉರುಳಿತು ವೀರಭದ್ರೇಶ್ವರ ರಥ, ತಪ್ಪಿದ ಭಾರಿ ಅನಾಹುತ

ಭಕ್ತರು ತೇರು ಎಳೆಯುತ್ತಿದ್ದಾಗ ಮೊದಲು ಚಕ್ರ ಮುರಿಯಿತು. ನಂತರ ರಥದ ಮೇಲ್ಭಾಗವು ಉರುಳಿತು.

Video: ಚಾಮರಾಜನಗರದ ಚೆನ್ನಪ್ಪನಪುರದಲ್ಲಿ ಉರುಳಿತು ವೀರಭದ್ರೇಶ್ವರ ರಥ, ತಪ್ಪಿದ ಭಾರಿ ಅನಾಹುತ
ಚಾಮರಾಜನಗರದ ಚೆನ್ನಪ್ಪನಪುರದಲ್ಲಿ ಉರುಳಿರುವ ವೀರಭದ್ರೇಶ್ವರ ರಥ
TV9 Web
| Edited By: |

Updated on: Nov 01, 2022 | 1:26 PM

Share

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರದಲ್ಲಿ ಮಂಗಳವಾರ (ನ 1) ವೀರಭದ್ರೇಶ್ವರ ರಥೋತ್ಸವದ ವೇಳೆ ರಥ ಮುರಿದ ಘಟನೆ ನಡೆದಿದೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಅನಾಹುತದಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎನ್ನುವುದು ಸಮಾಧಾನದ ಸಂಗತಿ. ವೀರಭದ್ರೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆಯಲ್ಲಿ ಭಕ್ತರು ತೇರು ಎಳೆಯುತ್ತಿದ್ದಾಗ ಮೊದಲು ಚಕ್ರ ಮುರಿಯಿತು. ನಂತರ ರಥದ ಮೇಲ್ಭಾಗವು ಉರುಳಿತು. ತುಸು ಹೆಚ್ಚುಕಡಿಮೆಯಾಗಿದ್ದರೂ ನೂರಾರು ಜನರ ಜೀವ ಹೋಗುತ್ತಿತ್ತು. ಅದೃಷ್ಟವಶಾತ್ ಭಕ್ತರು ಅಪಾಯದಿಂದ ಪಾರಾಗಿದ್ದಾರೆ.

ಗ್ರಾಮ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆ. ಕೊವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಹೀಗಾಗಿಯೇ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ನಿಗದಿಯಂತೆ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಆರಂಭವಾಯಿತು. ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ದೇಗುಲ ಆವರಣದಲ್ಲಿ ಒಂದು ಸುತ್ತು ರಥ ಎಳೆಯುವುದು ವಾಡಿಕೆ. ಅರ್ಧದಷ್ಟು ದೂರಕ್ಕೆ ಸಂಚರಿಸಿದ ನಂತರ ರಥದ ಚಕ್ರವು ಅಚಾನಕ್ ಆಗಿ ಕಲ್ಲಿನ ಮೇಲೆ ಹತ್ತಿದಾಗ ಸಮತೋಲನ ಏರುಪೇರಾಯಿತು. ಚಕ್ರವು ಮುರಿದಿದಿದ್ದರಿಂದ ರಥವು ಉರುಳಿತು. ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮಗಳ ನೂರಾರು ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು