AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲುಗಣಿಗೆ ಕಡಿವಾಣ ಹಾಕಲು ಮಡಹಳ್ಳಿ ಗ್ರಾಮಸ್ಥರ ಆಗ್ರಹ: ದುರಂತದಲ್ಲಿ ಹಲವರು ಮೃತಪಟ್ಟಿರುವ ಶಂಕೆ

ಗಣಿ ಕುಸಿತವಾದಾಗ ಎಷ್ಟು ಜನ ಸಿಲುಕಿದರು, ಎಷ್ಟು ಜನ ತಪ್ಪಿಸಿಕೊಂಡರು ಎಂಬುದು ಗೊತ್ತಾಗಲಿಲ್ಲ ಎಂದು ದುರಂತ ನಡೆದ ವೇಳೆ ಗಣಿಯಲ್ಲಿದ್ದ ಪ್ರತ್ಯಕ್ಷದರ್ಶಿ ಚಾಲಕ ಹೇಳಿದ್ದಾರೆ.

ಕಲ್ಲುಗಣಿಗೆ ಕಡಿವಾಣ ಹಾಕಲು ಮಡಹಳ್ಳಿ ಗ್ರಾಮಸ್ಥರ ಆಗ್ರಹ: ದುರಂತದಲ್ಲಿ ಹಲವರು ಮೃತಪಟ್ಟಿರುವ ಶಂಕೆ
ಬಂಡೆಗಳು ಟಿಪ್ಪರ್ ಮೇಲೆ ಕುಸಿದಿರುವುದು
TV9 Web
| Edited By: |

Updated on:Mar 05, 2022 | 11:19 AM

Share

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿ (Madahalli) ಗ್ರಾಮದ ಹೊರವಲಯದಲ್ಲಿರುವ ಗುಮ್ಮಕಲ್ಲುಗುಡ್ಡಗಣಿಯಲ್ಲಿ (Stone Quarry) ಫೆ 4ರಂದು ದುರಂತ ಸಂಭವಿಸಿತ್ತು.. ದುರಂತ ಸಂಭವಿಸಿದಾಗ ಗಣಿಯಲ್ಲಿ ಗಣಿಯಲ್ಲಿ 10 ಮಂದಿ ಕಂಪ್ರೆಸರ್ ಕಾರ್ಮಿಕರು, 5 ಟಿಪ್ಪರ್ 4 ಹಿಟಾಚಿ ವಾಹನಗಳಿದ್ದವು. ಟಿಪ್ಪರ್ ಹಾಗು ಹಿಟಾಚಿ ಚಾಲಕರು ಸೇರಿದಂತೆ ಗಣಿಯಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎಂದು ಕಲ್ಲುಗಣಿಯಲ್ಲಿ ಸಿಲುಕಿದ್ದ ಟಿಪ್ಪರ್ ಚಾಲಕ ನೂರುದ್ದೀನ್ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ಕುಸಿದ ಗಣಿಯಲ್ಲಿಯೇ ನಾಲ್ಕು ಗಂಟೆಗೂ ಹೆಚ್ಚು ಕಾಲ ಉಳಿದು, ಜೀವ ಬಿಗಿ ಹಿಡಿದಿದ್ದರು. ಬೆಳಿಗ್ಗೆ 11.40ರ ವೇಳೆಗೆ ಬಂಡೆಗಳು ಕುಸಿಯತೊಡಗಿದವು. ನಾನು ಟಿಪ್ಪರ್ ಒಳಗೆ ಕುಳಿತಿದ್ದೆ. ಗಣಿ ಕುಸಿತವಾದಾಗ ಎಷ್ಟು ಜನ ಸಿಲುಕಿದರು, ಎಷ್ಟು ಜನ ತಪ್ಪಿಸಿಕೊಂಡರು ಎಂಬುದು ಗೊತ್ತಾಗಲಿಲ್ಲ ಎಂದು ಹೇಳಿದರು.

ಕಲ್ಲುಗಣಿ ನಿಷೇಧಕ್ಕೆ ಗ್ರಾಮಸ್ಥರ ಒತ್ತಾಯ

ಮಡಹಳ್ಳಿ ಬಳಿಯ ಗುಮ್ಮಕಲ್ಲು ಗುಡ್ಡ ಬಂಡೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಗಮನ ಸೆಳೆದಿದೆ. ಗ್ರಾಮದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ನಿವಾಸಿಗಳ ಒತ್ತಾಯ ಮಾಡಿದ್ದಾರೆ. ಗಣಿಗಾರಿಕೆಯ ಶಬ್ದದಿಂದ ರಾತ್ರಿ ವೇಳೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗಣಿಗಾರಿಕೆ ನಿಲ್ಲಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗೋಮಾಳದ ಭೂಮಿಯಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಪ್ರಭಾವಿ ರಾಜಕಾರಣಿಗಳು ಗಣಿ ದುಸ್ಸಾಹಸದ ಹಿಂದಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇಬ್ಬರು ಮೃತಪಟ್ಟಿರುವ ಶಂಕೆ

ದುರಂತ ನಡೆದ ವೇಳೆ ಗಣಿಯಲ್ಲಿ ಉಳಿದಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಕಾರ್ಮಿಕರು ಬಂಡೆಗಳು ಉರುಳಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗಣಿಯಲ್ಲಿ ಒಟ್ಟು ಐವರು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು ಉಳಿದಿಬ್ಬರ ಶೋಧ ಕಾರ್ಯ ಶುಕ್ರವಾರ ಸಂಜೆಯವರೆಗೂ ನಡೆಯಿತು.

ಗುಡ್ಡದ ಅಕ್ಕಪಕ್ಕದಲ್ಲಿ ವಾಸವಾಗಿರುವ ಜನರು ಹೇಳುವ ಪ್ರಕಾರ ಗಣಿ ಪ್ರದೇಶದಲ್ಲಿ, ಗುಡ್ಡದ ಕೆಳಗೆ ಜಾಸ್ತಿ ಜನ ಕೆಲಸ ಮಾಡುತ್ತಿದ್ದರಂತೆ. ಘಟನೆಯ ಬಗ್ಗೆ ಮಾಧ್ಯಮದವರಿಗೆ ವಿವರಗಳನ್ನು ನೀಡಿದ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಪರವಾನಗಿ ಇಲ್ಲದೆ ಗಣಿಗಾರಿಕೆ ನಡೆಯುತ್ತಿತ್ತು ಎಂದು ಹೇಳಿದ್ದರು. ಬಂಡೆಗಳ ಕೆಳಗೆ ಸಿಕ್ಕಹಾಕಿಕೊಂಡಿರಬಹುದಾದ ಕಾರ್ಮಿಕರನ್ನು ರಕ್ಷಿಸಲು ಸ್ಥಳೀಯರು ಧಾವಿಸಿದಿದ್ದರು.

ರಕ್ಷಣಾ ಕಾರ್ಯಾಚರಣೆ ಚುರುಕು

ಮಡಹಳ್ಳಿ ಬಳಿ ಗುಮ್ಮಕಲ್ಲುಗುಡ್ಡದಲ್ಲಿ ಬಂಡೆ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್​ನ 25, ಅಗ್ನಿಶಾಮಕದಳದ 50 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಗುಡ್ಡದ ಅಡಿಯಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಿಟಾಚಿ ಮೇಲೆ ಬಿದ್ದಿರುವ ಬೃಹತ್ ಬಂಡೆಗಲ್ಲು ಬಿದ್ದಿದ್ದು, ಅದರೊಳಗೆ ವ್ಯಕ್ತಿಯೊಬ್ಬ ಇದ್ದ ಎಂದು ಹೇಳಲಾಗುತ್ತಿದೆ. ಮೃತ ಕಾರ್ಮಿಕನನ್ನು ಸರ್ಫರಾಜ್​ ಎಂದು ಗುರುತಿಸಲಾಗಿದೆ.

ಗಣಿಪದರ ಸಡಿಲಗೊಂಡು ಕಲ್ಲು ಕುಸಿದಿದೆ: ನಾಗಭೂಷಣ್

ಮಡಹಳ್ಳಿ ಬಳಿ ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಇಲಾಖೆಯ ಉಪ ನಿರ್ದೇಶಕ ನಾಗಭೂಷಣ್ ಪ್ರತಿಕ್ರಿಯಿಸಿದ್ದು, ಸುರಕ್ಷತಾ ಕ್ರಮಕೈಗೊಂಡಿಲ್ಲ ಎಂದು ಹೇಳಲು ಆಗುವುದಿಲ್ಲ ಎಂದಿದ್ದಾರೆ. ಗಣಿ ಪದರ ಸಡಿಲಗೊಂಡ ಒತ್ತಡದಿಂದ ಬಂಡೆಗಳು ಕುಸಿದಿವೆ. ಗಣಿಗಾರಿಕೆಯಿಂದ ತೊಂದರೆ ಆಗಿದೆ ಎಂದು ಯಾವುದೇ ದೂರು ದಾಖಲಾಗಿಲ್ಲ ಎಂದು ಗಣಿ ಇಲಾಖೆಯ ಉಪ ನಿರ್ದೇಶಕ ನಾಗಭೂಷಣ್ ಹೇಳಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆ ಬಳಿ ಆಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶದಲ್ಲಿ ಗುಡ್ಡದ ಮೇಲಿನ ಬಂಡೆ ಕುಸಿದು 2 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ

ಇದನ್ನೂ ಓದಿ: ಚಾಮರಾಜನಗರ: ಗುಮ್ಮಕಲ್ಲು ಗುಡ್ಡದಲ್ಲಿ ಟಿಪ್ಪರ್‌ ಮೇಲೆ ಬಂಡೆಗಳ ಕುಸಿತ; ಬಂಗಾಳ ಮೂಲದ ಕಾರ್ಮಿಕರು ಸಾವನ್ನಪ್ಪಿರುವ ಶಂಕೆ

Published On - 8:32 am, Sat, 5 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್