ಶಿವನೇ ನನಗೆ ಹುಡುಗಿ ಕರುಣಿಸು… ದೇವರಿಗೆ ಪತ್ರ ಬರೆದು ಹುಂಡಿಗೆ ಹಾಕಿರುವ ಭೂಪ

ದೇವರೇ ನನಗೆ ಹುಡುಗಿ ಕರುಣಿಸು ಎಂದು ವ್ಯಕ್ತಿಯೊಬ್ಬ ದೇವರಿಗೆ ಪತ್ರ ಬರೆದು ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಕಾಣಿಕೆ ಹುಂಡಿಗೆ ಹಾಕಿದ್ದಾನೆ. ಮತ್ತೊಂದು ಪತ್ರವೂ ಪತ್ತೆಯಾಗಿದೆ.

ಶಿವನೇ ನನಗೆ ಹುಡುಗಿ ಕರುಣಿಸು... ದೇವರಿಗೆ ಪತ್ರ ಬರೆದು ಹುಂಡಿಗೆ ಹಾಕಿರುವ ಭೂಪ
ಶ್ರೀ ಚಾಮರಾಜೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮತ್ತು ಹುಂಡಿಯಲ್ಲಿ ಪತ್ತೆಯಾದ ಪತ್ರ
Follow us
| Updated By: Rakesh Nayak Manchi

Updated on:Dec 23, 2022 | 12:01 PM

ಚಾಮರಾಜನಗರ: ಇಷ್ಟಾರ್ಥಗಳನ್ನು ಕರುಣಿಸು ಎಂದು ದೇವರಿಗೆ ಕಾಣಿಕೆ ಹಾಕುವುದನ್ನು ನೋಡಿದ್ದೇವೆ. ತೀರ ಅಪರೂಪವೆಂಬಂತೆ ಕಾಣಿಕೆ ಹಾಕುವ ಹುಂಡಿಯಲ್ಲಿ ಕೆಲವೊಂದು ವಿಚಿತ್ರ ಪತ್ರಗಳು ಪತ್ತೆಯಾಗುತ್ತವೆ. ಅಂತಹದ್ದೇ ಪತ್ರವೊಂದು ಇದೀಗ ಚಾಮರಾಜನಗರ (Chamarajanagar)ದ ಶ್ರೀ ಚಾಮರಾಜೇಶ್ವರ ದೇವಾಲಯ (Sri Chamarajeshwara Temple)ದ ಹುಂಡಿಯಲ್ಲಿ ಪತ್ತೆಯಾಗಿದೆ. ಅದು ಕೂಡ ಒಂದು ಹುಡುಗಿಗಾಗಿ. ಹುಂಡಿ ಎಣಿಸುವ ಕಾರ್ಯ ಮುಂದುವರಿಯುತ್ತಿದ್ದಂತೆ ಮತ್ತೊಂದು ಪತ್ರವೂ ಪತ್ತೆಯಾಗಿದೆ. ಇದರಲ್ಲಿ ದೇವರ ರಾಜ್ಯ ಸಮೀಪಿಸಿದೆ ಎಂದು ಬರೆಯಲಾಗಿದೆ.

Sri Chamarajeshwara Temple

ಹುಡುಗಿಗಾಗಿ ದೇವರಿಗೆ ಬರೆದ ಪತ್ರ

ಇದನ್ನೂ ಓದಿ: Karnataka Startup Policy: ಸ್ಟಾರ್ಟಪ್​ಗಳ ಉತ್ತೇಜನಕ್ಕೆ ಮಾಸ್ಟರ್ ಪ್ಲ್ಯಾನ್; 100 ಕೋಟಿ ರೂ. ನಿಧಿಗೆ ಸಚಿವ ಸಂಪುಟ ಅಸ್ತು

ಚಾಮರಾಜೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಸುವಾಗ ಹಣದ ಜೊತೆ ಎರಡು ಪತ್ರಗಳು ಪತ್ತೆಯಾಗಿವೆ. ರಾಜೇಂದ್ರ ಉಪ್ಪಾರ ಬೀದಿ ಎಂದು ಬರೆದಿರುವ ಪತ್ರದಲ್ಲಿ ದೇವರೇ ನನಗೆ ಹುಡುಗಿಯನ್ನು ಕರುಣಿಸು ಎಂದು ಬರೆಯಲಾಗಿದೆ. ಅಷ್ಟೇ ಅಲ್ಲದೆ, ದೇವರ ರಾಜ್ಯವು ಸಮೀಪಿಸಿದೆ ಎಂಬ ಒಕ್ಕಣೆಯುಳ್ಳ ಮತ್ತೊಂದು ಪತ್ರವೂ ಪತ್ತೆಯಾಗಿದೆ. ಮನುಷ್ಯ ದೇವರಿಗೆ ಅವಿಧೇಯನಾಗಿ ನಡೆದುಕೊಂಡು ದೇವರ ಪ್ರೀತಿ ಕಳೆದುಕೊಂಡ ಎಂದು ಪತ್ರದಲ್ಲಿ ಬರೆಯಲಾಗಿದೆ.

Sri Chamarajeshwara Temple

ಕಾಣಿಕೆ ಹುಂಡಿಯಲ್ಲಿ ಪತ್ತೆಯಾದ ಮತ್ತೊಂದು ಪತ್ರ

ಇದನ್ನೂ ಓದಿ: Karnataka Winter Session 2022 Live: ಚಳಿಗಾಲದ ಅಧಿವೇಶನದ ಐದನೇ ದಿನವೂ ಸಾಲು ಸಾಲು ಪ್ರತಿಭಟನೆಗಳು

ಚಾಮರಾಜೇಶ್ವರನಿಗೆ 7 ಲಕ್ಷ ಹಣ ಅರ್ಪಿಸಿದ ಭಕ್ತರು

ಚಾಮರಾಜೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಈ ಬಾರಿ ಚಾಮರಾಜೇಶ್ವರ ಲಕ್ಷಾಧಿಪತಿಯಾಗಿದ್ದಾನೆ. ಹುಂಡಿಯಲ್ಲಿ 7,61,641 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:35 am, Fri, 23 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ