AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿ ತೋಡಿಸಿಕೊಡಿ ಇಲ್ಲ ನನಗೆ ಸರ್ಕಾರಿ ನೌಕರಿ ಕೊಡಿ; ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ

ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರೆ ಜೊತೆಗೆ ತನ್ನ ಪತ್ರ ಹಾಕಿದ್ದಾನೆ. ಇನ್ನು ಮತ್ತೊಂದು ಕಡೆ ಮತದಾರರು‌ ಮತ ಪೆಟ್ಟಿಗೆಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನ ಹಾಕಿದ್ದಾರೆ. ಬ್ಯಾಲೇಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳನ್ನ ಬಳಸಿ ಬೈದಿದ್ದಾರೆ.

ಕೊಳವೆ ಬಾವಿ ತೋಡಿಸಿಕೊಡಿ ಇಲ್ಲ ನನಗೆ ಸರ್ಕಾರಿ ನೌಕರಿ ಕೊಡಿ; ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ
TV9 Web
| Updated By: Digi Tech Desk|

Updated on:Jun 16, 2022 | 10:14 AM

Share

ಚಾಮರಾಜನಗರ: ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ನಿನ್ನೆಯಿಂದಲೂ ಮತ ಎಣಿಕೆ ಕಾರ್ಯ ನಡಿಯುತ್ತಿದೆ. ಸದ್ಯ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ವೇಳೆ ಮತದಾರ ಅಭ್ಯರ್ಥಿಗೆ ವಿಶೇಷ ಬೇಡಿಕೆ ಇಟ್ಟು ಪತ್ರ ಬರೆದು ಮತ ಪೆಟ್ಟಿಗೆಗೆ ಪತ್ರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಎಂಬ ಮತದಾರ ಕೊಳವೆ ಬಾವಿ ತೋಡಿಸಿಕೊಡಿ ಅಂತ ಪತ್ರ ಬರೆದು ಮತ ಪೆಟ್ಟಿಗೆಗೆ ಪತ್ರ ಹಾಕಿದ್ದಾನೆ. ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದ್ರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲ ಅಂದ್ರೆ ಜಮೀನಿನಲ್ಲಿ‌ ಕೊಳವೆಬಾವಿ ತೋಡಿಸಿಕೊಡಿ ಎಂದು ಯುವಕ ಪತ್ರದ ಮೂಲಕ ಮನವಿ ಮಾಡಿದ್ದಾನೆ. ಹಾಗೂ ಪೆಟ್ರೋಲ್ ಬೆಲೆ ಇಳಿಸಿ ಎಂದು ಮನವಿ ಮಾಡಿದ್ದಾನೆ.

ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರೆ ಜೊತೆಗೆ ತನ್ನ ಪತ್ರ ಹಾಕಿದ್ದಾನೆ. ಇನ್ನು ಮತ್ತೊಂದು ಕಡೆ ಮತದಾರರು‌ ಮತ ಪೆಟ್ಟಿಗೆಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನ ಹಾಕಿದ್ದಾರೆ. ಬ್ಯಾಲೇಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳನ್ನ ಬಳಸಿ ಬೈದಿದ್ದಾರೆ. ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲಾ ಎಂದು ಬ್ಯಾಲೇಟ್ ಪೇಪರ್ ಮೇಲೆ ಮತದಾರನೊಬ್ಬ ಬರೆದು ಬೈದಿದ್ದಾನೆ. ಇದನ್ನೂ ಓದಿ: ನನ್ನ ಮೊದಲ ಸಂಬಳದಿಂದ ನಾನು ಕಲಿತ ಪಾಠ !

ವಾಯವ್ಯ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟಕಗೊಳ್ಳಲಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:42 am, Thu, 16 June 22

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!