AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿ ತೋಡಿಸಿಕೊಡಿ ಇಲ್ಲ ನನಗೆ ಸರ್ಕಾರಿ ನೌಕರಿ ಕೊಡಿ; ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ

ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರೆ ಜೊತೆಗೆ ತನ್ನ ಪತ್ರ ಹಾಕಿದ್ದಾನೆ. ಇನ್ನು ಮತ್ತೊಂದು ಕಡೆ ಮತದಾರರು‌ ಮತ ಪೆಟ್ಟಿಗೆಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನ ಹಾಕಿದ್ದಾರೆ. ಬ್ಯಾಲೇಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳನ್ನ ಬಳಸಿ ಬೈದಿದ್ದಾರೆ.

ಕೊಳವೆ ಬಾವಿ ತೋಡಿಸಿಕೊಡಿ ಇಲ್ಲ ನನಗೆ ಸರ್ಕಾರಿ ನೌಕರಿ ಕೊಡಿ; ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಪೆಟ್ಟಿಗೆಯಲ್ಲಿ ಸಿಕ್ತು ವಿಶೇಷ ಪತ್ರ
TV9 Web
| Edited By: |

Updated on:Jun 16, 2022 | 10:14 AM

Share

ಚಾಮರಾಜನಗರ: ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ನಿನ್ನೆಯಿಂದಲೂ ಮತ ಎಣಿಕೆ ಕಾರ್ಯ ನಡಿಯುತ್ತಿದೆ. ಸದ್ಯ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ವೇಳೆ ಮತದಾರ ಅಭ್ಯರ್ಥಿಗೆ ವಿಶೇಷ ಬೇಡಿಕೆ ಇಟ್ಟು ಪತ್ರ ಬರೆದು ಮತ ಪೆಟ್ಟಿಗೆಗೆ ಪತ್ರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಎಂಬ ಮತದಾರ ಕೊಳವೆ ಬಾವಿ ತೋಡಿಸಿಕೊಡಿ ಅಂತ ಪತ್ರ ಬರೆದು ಮತ ಪೆಟ್ಟಿಗೆಗೆ ಪತ್ರ ಹಾಕಿದ್ದಾನೆ. ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದ್ರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲ ಅಂದ್ರೆ ಜಮೀನಿನಲ್ಲಿ‌ ಕೊಳವೆಬಾವಿ ತೋಡಿಸಿಕೊಡಿ ಎಂದು ಯುವಕ ಪತ್ರದ ಮೂಲಕ ಮನವಿ ಮಾಡಿದ್ದಾನೆ. ಹಾಗೂ ಪೆಟ್ರೋಲ್ ಬೆಲೆ ಇಳಿಸಿ ಎಂದು ಮನವಿ ಮಾಡಿದ್ದಾನೆ.

ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರೆ ಜೊತೆಗೆ ತನ್ನ ಪತ್ರ ಹಾಕಿದ್ದಾನೆ. ಇನ್ನು ಮತ್ತೊಂದು ಕಡೆ ಮತದಾರರು‌ ಮತ ಪೆಟ್ಟಿಗೆಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನ ಹಾಕಿದ್ದಾರೆ. ಬ್ಯಾಲೇಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳನ್ನ ಬಳಸಿ ಬೈದಿದ್ದಾರೆ. ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲಾ ಎಂದು ಬ್ಯಾಲೇಟ್ ಪೇಪರ್ ಮೇಲೆ ಮತದಾರನೊಬ್ಬ ಬರೆದು ಬೈದಿದ್ದಾನೆ. ಇದನ್ನೂ ಓದಿ: ನನ್ನ ಮೊದಲ ಸಂಬಳದಿಂದ ನಾನು ಕಲಿತ ಪಾಠ !

ವಾಯವ್ಯ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟಕಗೊಳ್ಳಲಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:42 am, Thu, 16 June 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್