AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅರಣ್ಯ ಇಲಾಖೆ‌ ವಾಹನದ ಮೇಲೆ ಕಾಡಾನೆ ದಾಳಿ, ಜೀಪ್​ ನುಚ್ಚುನೂರು, ಅಧಿಕಾರಿ-ಸಿಬ್ಬಂದಿಗೆ ಗಾಯ

ಆನೆ ದಾಳಿಯಿಂದ ವಾಹನ ಚಾಲಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓಂಕಾರ ಒಲಯಕ್ಕೆ ಸೇರಿದ ಶಿವಕುಮಾರಪುರ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಆನೆಯನ್ನು ಕಾಡಿಗಟ್ಟಲು ಹರಸಾಹಸ ಪಡುವಂತಾಗಿದೆ.

ಚಾಮರಾಜನಗರ: ಅರಣ್ಯ ಇಲಾಖೆ‌ ವಾಹನದ ಮೇಲೆ ಕಾಡಾನೆ ದಾಳಿ, ಜೀಪ್​ ನುಚ್ಚುನೂರು,  ಅಧಿಕಾರಿ-ಸಿಬ್ಬಂದಿಗೆ ಗಾಯ
ವಾಹನದ ಮೇಲೆ ಕಾಡಾನೆ ದಾಳಿ
TV9 Web
| Edited By: |

Updated on:Jan 07, 2022 | 11:28 AM

Share

ಚಾಮರಾಜನಗರ: ಬೆಳ್ಳಂಬೆಳಗ್ಗೆ ಜಮೀನಿಗೆ ನುಗ್ಗಿದ ಆನೆಯನ್ನು ಕಾಡಿಗೆ ಓಡಿಸಲು ಬಂದ ಅರಣ್ಯ ಇಲಾಖೆ (Forest department) ವಾಹನದ ಮೇಲೆ ಆನೆ ದಾಳಿ (Elephant) ಮಾಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಕುಮಾರಪುರದಲ್ಲಿ ಅರಣ್ಯ ಇಲಾಖೆ‌ ವಾಹನದ ಮೇಲೆ ಕಾಡಾನೆ ದಾಳಿ ಮಾಡಿದೆ. ದಾಳಿಯಿಂದ ವಾಹನ ಚಾಲಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓಂಕಾರ ಒಲಯಕ್ಕೆ ಸೇರಿದ ಶಿವಕುಮಾರಪುರ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಆನೆಯನ್ನು ಕಾಡಿಗಟ್ಟಲು ಹರಸಾಹಸ ಪಡುವಂತಾಗಿದೆ.

ಕಲಬುರಗಿ: ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದಿ ನಾಯಿಗಳ ದಾಳಿ ಕಲಬುರಗಿ ಜಿಲ್ಲೆಯ ತಾಜ್ ನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದಿ ನಾಯಿಗಳು ದಾಳಿ ಮಾಡಿವೆ. ಐವರು ಮಕ್ಕಳಿಗೆ ಬೀದಿ ನಾಯಿ ಕಚ್ಚಿದ್ದು, ಗಾಯಗೊಂಡ ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ದಾವಣಗೆರೆ: 4 ತಿಂಗಳಿಂದ ಗ್ರಾಮದಲ್ಲಿ ಹೆಚ್ಚಾದ ಕೋತಿಗಳ ಉಪಟಳ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಸಿಕ್ಕಸಿಕ್ಕವರ ಮೇಲೆ ಕೋತಿಗಳು ದಾಳಿ ನಡೆಸುತ್ತಿವೆ. ಕಳೆದ 4 ತಿಂಗಳಿಂದ ಗ್ರಾಮದಲ್ಲಿ ಕೋತಿಗಳ ಉಪಟಳ ಹೆಚ್ಚಾಗಿದೆ. ಆದಷ್ಟು ಬೇಗ ಈ ಬಗ್ಗೆ ಕ್ರಮವಹಿಸಿ ಎಂದು ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಪಿಡಿಓಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆ ಬೆಳಗಾಗುತ್ತಿದ್ದಂತೆ ಮನೆಗಳ ಮೇಲೆ ಕೋತಿಗಳು ಓಡಾಡುತ್ತಿವೆ. ಹತ್ತಾರು ಮನೆಗಳ ಹಂಚು ನಾಶ ಮಾಡಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಂಡು ಅರಣ್ಯಕ್ಕೆ ಕೋತಿಗಳನ್ನು ಅಟ್ಟುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೈಕ್ ಸವಾರನೊಬ್ಬ ಆನೆ ದಾಳಿಯಿಂದ ತಪ್ಪಿಸಿಕೊಂಡಿದ್ದು ರೋಚಕ ಅದರೆ ಬೈಕ್  ತೆಗೆದುಕೊಳ್ಳಲು ಹೋಗಿದ್ದು ಮಾತ್ರ ಮೂರ್ಖತನ!

ಕೊಡಗು: ಕಾಡಾನೆ ದಾಳಿಗೆ ಬ್ರೇಕ್​; ಸೈರನ್ ಮತ್ತು ಸೆನ್ಸಾರ್ ಅಳವಡಿಕೆಯೇ ಹೊಸ ಆಶಾಕಿರಣ

Published On - 11:04 am, Fri, 7 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?