ಚಾಮರಾಜನಗರ: ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಆಸ್ಪತ್ರೆಗೆ ಕೆರೆದೆಯ್ಯುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾಯಿ ಹಾಗು ಮಗುವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗು ಚಿಕಿತ್ಸೆ ಪಡೆಯುತ್ತಿದ್ದಾರೆ.  

ಚಾಮರಾಜನಗರ: ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ
ಆಂಬ್ಯುಲೆನ್ಸ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ
Edited By: ವಿವೇಕ ಬಿರಾದಾರ

Updated on: Feb 15, 2024 | 2:33 PM

ಚಾಮರಾಜನಗರ, ಫೆಬ್ರವರಿ 15: ಆಸ್ಪತ್ರೆಗೆ ಕೆರೆದೆಯ್ಯುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​​ನಲ್ಲಿ (Ambulance) ಗರ್ಭಿಣಿ (Pregnant) ಮಗುವಿಗೆ ಜನ್ಮ ನೀಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೀಪುರ (Bandipur) ಕಾಡಂಚಿನ ಕಣಿಯನಪುರ ಕಾಲೋನಿ ನಿವಾಸಿಯಾಗಿರುವ ಅನುಶ್ರೀ ಅವರು ಅವರನ್ನು ಸಂಬಂಧಿಕರು ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಮಾರ್ಗ ಮಧ್ಯದಲ್ಲಿ ಹೆರಿಗೆ ನೋವು ಕಾಣಿಕೊಂಡು, ಅನುಶ್ರೀ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ತಾಯಿ ಹಾಗು ಮಗುವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ (Gundlupet Government Hospital) ದಾಖಲಿಸಲಾಗಿದೆ. ಸದ್ಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

2023ರ ಡಿಸೆಂಬರ್​ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಬೆಳಗೋಡು ಗ್ರಾಮದ ಮಹಿಳೆಯನ್ನ 108 ಆಂಬ್ಯುಲೆನ್ಸ್​ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದರು. ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ತಲುಪಿಸಲು ಮುಂದಾದರೂ ನೋವು ತಡೆಯಲಾಗದೆ ಮಹಿಳೆ ಕೂಗಾಡಿದ್ದರು. ಆಗ ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್​ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹಿಮಪಾತ, ದಿಕ್ಕೇ ತೋಚದ ಸ್ಥಿತಿಯಲ್ಲಿದ್ದಾಗ ಗರ್ಭಿಣಿ ನೆರವಿಗೆ ದೇವರಂತೆ ಧಾವಿಸಿದ ಸೈನಿಕರು

ಮಹಿಳೆ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿದ್ದು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತ್ತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಮಾಹಿತಿ ನೀಡಿದ್ದರು. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Thu, 15 February 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us