AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ರಸ್ತೆ ಕಾಮಗಾರಿ ಆರಂಭವಾಗಿ 5 ವರ್ಷವೇ ಕಳೆದರೂ ಇನ್ನೂ ಕಂಪ್ಲೀಟ್ ಆಗಿಲ್ಲ, ವಾಹನ ಸವಾರರಿಗೆ ತ್ರಿಶಂಕು

ರಸ್ತೆ ತುಂಬಾ ಹರಡಿರುವ ಜಲ್ಲಿ ಕಲ್ಲುಗಳು.. ಕುಂಟುತ್ತಾ ಸಾಗುತ್ತಿರುವ ರಸ್ತೆ ಕಾಮಗಾರಿ.. ಜೀವ ಪಣಕಿಟ್ಟು ಸಂಚರಿಸುತ್ತಿರುವ ವಾಹನ ಸವಾರರು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರದ ಅಂಬೇಡ್ಕರ್ ಭವನದ ಪಕ್ಕದಲ್ಲೇ ಇರೋ ರಸ್ತೆಯಲ್ಲಿ. ಹೌದು ಸಿಮೆಂಟ್ ರಸ್ತೆ ಮಾಡುವ ಕಾಮಗಾರಿಗೆ ಐದು ವರ್ಷಗಳ ಹಿಂದೆಯೇ ಚಾಲನೆ ಸಿಕ್ಕಿತ್ತು. ಆದರೆ ಇನ್ನಾದರೂ...

ಚಾಮರಾಜನಗರ ರಸ್ತೆ ಕಾಮಗಾರಿ ಆರಂಭವಾಗಿ 5 ವರ್ಷವೇ ಕಳೆದರೂ ಇನ್ನೂ ಕಂಪ್ಲೀಟ್ ಆಗಿಲ್ಲ, ವಾಹನ ಸವಾರರಿಗೆ ತ್ರಿಶಂಕು
ಚಾಮರಾಜನಗರ ರಸ್ತೆ ಕಾಮಗಾರಿ ಆರಂಭವಾಗಿ 5 ವರ್ಷವೇ ಕಳೆದರೂ ಇನ್ನೂ ಕಂಪ್ಲೀಟ್ ಆಗಿಲ್ಲ,
ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Feb 06, 2024 | 5:18 PM

Share

ಅಂದು ಚಾಮರಾಜನಗರದ ಪ್ರತಿಷ್ಠಿತ ರಸ್ತೆಯ ಕಾಮಗಾರಿಗೆ 5 ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದ್ರೆ ರಸ್ತೆ ಕಾಮಗಾರಿ ಆರಂಭವಾಗಿ ಐದು ವರ್ಷಗಳೇ ಕಳೆದರೂ ಇನ್ನೂ ಕಂಪ್ಲೀಟ್ ಆಗಿಲ್ಲ. ಗುತ್ತಿಗೆದಾರನ ಕಳ್ಳಾಟಕ್ಕೆ ಪ್ರತಿನಿತ್ಯ ವಾಹನ ಸವಾರರು ಹಿಡಿ ಶಾಪ ಹಾಕುತ್ತಾ ಸಂಚರಿಸುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

ಅದು ಚಾಮರಾಜನಗರದ ಅಂಬೇಡ್ಕರ್ ಭವನದ ಪಕ್ಕದಲ್ಲೇ ಇರೋ ರಸ್ತೆಯ ದುಃಸ್ಥಿತಿ . ಹೌದು ಸಿಮೆಂಟ್ ರಸ್ತೆ ಮಾಡುವ ಕಾಮಗಾರಿಗೆ ಐದು ವರ್ಷಗಳ ಹಿಂದೆಯೇ ಚಾಲನೆ ಸಿಕ್ಕಿತ್ತು. ಕಳೆದ ಭಾರಿ ಲೋಕಸಭಾ ಚುನಾವಣೆಗೂ ಮುನ್ನವೆ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಮಾಡಲಾಗಿತ್ತು. ಆದ್ರೆ ಈಗ ಮತ್ತೊಮ್ಮೆ ಲೋಕಕಭಾ ಚುನಾವಣೆಯ ದಿನಾಂಕ ಘೋಷಣೆಗೆ ದಿನಗಣನೆ ಶುರುವಾಗಿದೆ. ಆದರೆ ಇನ್ನೂ ಕೂಡ ಕಾಮಗಾರಿ ಪೂರ್ಣಗೊಂಡೇ ಇಲ್ಲ. ಇದರಿಂದ ವಾಹನ ಸವಾರರು ಪ್ರತಿ ನಿತ್ಯ ನರಕ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ಸಾಮಾಜಿಕ ಹೋರಾಟಗಾರ ಶ್ರೀನಿವಾಸ್ ಗೌಡ.

ಕಾಂಕ್ರಿಟ್ ರಸ್ತೆ ಮಾಡುವುದಾಗಿ 5 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಾಮಗಾರಿಗೆ ಚಾಲನೆ ಸಿಕ್ಕಿದ್ದರೂ ಇನ್ನು ಸಹ ಗುತ್ತಿಗೆದಾರ ಕಾಮಗಾರಿ ಕಂಪ್ಲೀಟ್ ಮಾಡಿಲ್ಲ. ಕೇಳಿದರೆ ಬಿಲ್ ಸ್ಯಾಂಕ್ಷನ್ ಆಗಿಲ್ಲ, ಕೋರ್ಟ್ ನಲ್ಲಿ ದಾವೆ ಇದೆ ಎಂಬ ಸಬೂಬು ಮಾತುಗಳನ್ನ ಆಡುತ್ತಾನೆ. 500 ಮೀಟರ್ ರಸ್ತೆ ಕಾಮಗಾರಿ ಮಾಡೋಕೆ ಐದು ವರ್ಷ ತೆಗೆದುಕೊಂಡ್ರೆ ಹೇಗೆ ಎಂಬ ಪ್ರಶ್ನೆಗಳನ್ನ ಜನಸಾಮಾನ್ಯರು ಮುಂದಿಡುತ್ತಿದ್ದಾರೆ. ಅಷ್ಟೇ ಅಲ್ಲದೆ ವಾಹನ ಸವಾರರು ಸಂಚರಿಸುವ ಮಾರ್ಗದಲ್ಲಿ ದಪ್ಪ ದಪ್ಪ ಜಲ್ಲಿ ಹಾಕಿದ್ದು ಈ ಜಲ್ಲಿಗಳ ಮೇಲೆ ಬೈಕ್ ಓಡಿಸಲಾಗದೆ ವಾಹನ ಸವಾರರು ಬಿದ್ದು ಪೆಟ್ಟು ಮಾಡಿಕೊಳ್ಳುವ ಪ್ರಸಂಗಗಳು ಸಾಮಾನ್ಯವಾಗಿವೆ ಎನ್ನುತಾರೆ ಸಾಮಾಜಿಕ ಹೋರಾಟಗಾರ ಶ್ರೀನಿವಾಸ್ ಗೌಡ. ಅದೇನೆ ಹೇಳಿ ಒಂದು ರಸ್ತೆಯ ಕಾಮಗಾರಿ ಮುಗಿಸಲು ಐದು ವರ್ಷಗಳೇ ತೆಗೆದು ಕೊಂಡಿದ್ದರೂ ಅದಿನ್ನೂ ಪೂರ್ಣಗೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು