AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು- ಯತೀಂದ್ರ ಸಿದ್ದರಾಮಯ್ಯ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ‘ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದಿದ್ದಾರೆ.

ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು- ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 27, 2024 | 6:41 PM

ಚಾಮರಾಜನಗರ, ಜ.27: ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಹೇಳಿದ್ದಾರೆ. ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಭರವಸೆ ಈಡೇರಿಸಿಲ್ಲ. ಆದರೂ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ, ರಾಮಮಂದಿರ ಮಾಡುವುದು ಗ್ಯಾರಂಟೀನಾ ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ರಾಮರಾಜ್ಯ ಆಗುತ್ತೆ-ಯತೀಂದ್ರ

ಸಮಾಜದಲ್ಲಿ ಸಮಾನತೆ ಆದಾಗ, ಹಸಿವು ಮುಕ್ತ ಆದಾಗ ಹಾಗೂ ಯುವಕರಿಗೆ ಸರಿಯಾದ ಶಿಕ್ಷಣ ಉದ್ಯೋಗ ಜೊತೆಗೆ ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ರಾಮರಾಜ್ಯ ಆಗುತ್ತದೆ. ದೇವರು ಸಾಕ್ಷಾತ್ಕಾರ ಆಗಬೇಕಾದ್ರೆ ದೊಡ್ಡ ದೊಡ್ಡ ಭವ್ಯವಾದ ದೇವಸ್ಥಾನ ಕಟ್ಟಬೇಕಿಲ್ಲ. ಸಾವಿರಾರು ವರ್ಷಗಳಿಂದ ಹಿಂದೂ ಧರ್ಮ ಇದೆ, ನೂರಾರು ದೇವಸ್ಥಾನಗಳಿವೆ. ಆದ್ರೆ, ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆ ಹೋಗಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ:ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ ಮಾಡ್ತಾರೆ, ನಾವಲ್ಲ; ಯತೀಂದ್ರ ಹೇಳಿಕೆಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಯತೀಂದ್ರ ಸಿದ್ದರಾಮಯ್ಯಗೆ ಯುವಕನಿಂದ ನಿಂದನೆ; ಅರೆಸ್ಟ್​

ಇನ್ನು ಕನಕ ಜಯಂತಿ ಕಾರ್ಯಕ್ರಮದ ವೇಳೆ ಫುಲ್ ಹೈಡ್ರಾಮ ನಡೆದಿದೆ. ಯತೀಂದ್ರ ಸಿದ್ದರಾಮಯ್ಯಗೆ ಬೈಕ್​ನಲ್ಲಿ ಬಂದಿದ್ದ ಯುವಕನೊಬ್ಬ ಅವಾಚ್ಯ ಶಬ್ದದಿಂದ ನಿಂಧಿಸಿ ಪರಾರಿಯಾದ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ರಂಜಿತ್ ಬಂಧಿತ ಆರೋಪಿ. ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವಾಗ ಕೇಂದ್ರ ಸರ್ಕಾರ ಹಾಗೂ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡುವಾಗ ಅವಾಚ್ಯ ಶಬ್ದದಿಂದ ನಿಂದಿಸಿ ಹೋಗಿದ್ದವ ಪುನಃ ಮೈದಾನಕ್ಕೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Sat, 27 January 24

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ