AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಚಾಮರಾಜನಗರದ ಸುವರ್ಣಾವತಿ ಜಲಾಶಯವು ಫೆಂಗಲ್ ಚಂಡಮಾರುತದ ಪ್ರಭಾವದಿಂದ ಎರಡನೇ ಬಾರಿ ತುಂಬಿದೆ. ಕಳೆದ ವರ್ಷ ಮತ್ತು ಮುಂಗಾರು ಮಳೆಯಲ್ಲಿ ಜಲಾಶಯ ಖಾಲಿಯಾಗಿದ್ದು ರೈತರನ್ನು ಆತಂಕಕ್ಕೀಡುಮಾಡಿತ್ತು. ಈಗಿನ ನೀರಿನಿಂದ ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಹಿಂಗಾರು ಬೆಳೆಗೆ ನೀರಾವರಿ ಸಾಧ್ಯವಾಗಲಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 02, 2024 | 7:24 PM

Share

ಚಾಮರಾಜನಗರ, ಡಿಸೆಂಬರ್​​ 02: ಆ ಜಲಾಶಯ ಕಳೆದ ವರ್ಷ ತುಂಬದೇ ರೈತರನ್ನು ಸಂಕಷ್ಟಕ್ಕೀಡು ಮಾಡಿತ್ತು. ಈ ವರ್ಷದ ಮುಂಗಾರು ಮಳೆಯಲ್ಲೂ ಜಲಾಶಯಕ್ಕೆ ನೀರು ಬರಲೇ ಇಲ್ಲ. ಆದರೆ ಇದೀಗ ಫೆಂಗಲ್ ಚಂಡಮಾರುತದ ಎಫೆಕ್ಟ್​ಯಿಂದಾಗಿ ಎರಡನೇ ಬಾರಿ ಸುವರ್ಣಾವತಿ ಜಲಾಶಯ (suvarnavati Dam) ತುಂಬಿದ್ದು ಸ್ಥಳೀಯ ಶಾಸಕ ಬಾಗಿನ ಅರ್ಪಿಸಿದ್ದಾರೆ.

ಎರಡನೇ ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಜಿಲ್ಲೆಯ ಸುವರ್ಣಾವತಿ ಜಲಾಶಯ ಕಳೆದ ವರ್ಷ ಅಷ್ಟೇ ಅಲ್ಲ ಮುಂಗಾರಿನಲ್ಲೂ ತುಂಬದೆ ರೈತರನ್ನು ಚಿಂತೆಗೀಡು ಮಾಡಿತ್ತು. ಆದರೆ ಜಿಲ್ಲೆಯ ಗಡಿಭಾಗ ಫೆಂಗಲ್ ಚಂಡಮಾರುತದ ಎಫೆಕ್ಟ್​ನಿಂದ ದಿಂಬಂ ಘಾಟ್‌ನಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾದ ಕಾರಣ ಸುವರ್ಣಾವತಿ ಡ್ಯಾಂ ವರ್ಷದಲ್ಲಿ ಎರಡನೇ ಬಾರಿ ತುಂಬಿದ್ದು, ಇಂದು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಬಾಗಿನವನ್ನ ಅರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ

55 ಅಡಿ ಸಾಮರ್ಥ್ಯದ ಜಲಾಶಯ ಸದ್ಯ 55 ಅಡಿ ಭರ್ತಿಯಾಗಿದೆ. ಒಳ ಹರಿವು ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ 150 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಿ ಒಳ ಹಾಗೂ ಹೊರ ಹರಿವು ಹೆಚ್ಚಳ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಸದ್ಯ ನದಿಯಿಂದ ಕರಿನಂಜನಪುರದ ದೊಡ್ಡಕೆರೆ, ಚಿಕ್ಕಕೆರೆ, ಸಿಂಡಗೆರೆ, ಬಂಡೀಗೆರೆ ನಲ್ಲೂರು, ನಾಗವಳ್ಳಿ ಸೇರಿದಂತೆ ಹತ್ತಾರು ಕೆರೆ ಕಟ್ಟೆಗಳಿಗೆ ನೀರು ಹರಿಯುತ್ತಿದ್ದು ಈ ಕೆರೆಕಟ್ಟೆಗಳು ತುಂಬತೊಡಗಿವೆ. ಇದರಿಂದ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕಿನ ಹಲವೆಡೆ ಅಂತರ್ಜಲ ವೃದ್ದಿಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಸಭೆ ವೇಳೆ ಒಳ ನುಗ್ಗಿದ ಮಳೆ ನೀರು

ಸುವರ್ಣಾವತಿ ಜಲಾಶಯ 7000 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಹಿಂಗಾರು ಬೆಳೆ ಬೆಳೆಯಲು ಜಲಾಶಯದಿಂದ ಚಾನೆಲ್‌ಗಳಿಗೆ ನೀರು ಬಿಡುಗಡೆ ಮಾಡಬೇಕು ಎಂಬುದು ರೈತರ ಆಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ