AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಚಾಮರಾಜನಗರದ ಸುವರ್ಣಾವತಿ ಜಲಾಶಯವು ಫೆಂಗಲ್ ಚಂಡಮಾರುತದ ಪ್ರಭಾವದಿಂದ ಎರಡನೇ ಬಾರಿ ತುಂಬಿದೆ. ಕಳೆದ ವರ್ಷ ಮತ್ತು ಮುಂಗಾರು ಮಳೆಯಲ್ಲಿ ಜಲಾಶಯ ಖಾಲಿಯಾಗಿದ್ದು ರೈತರನ್ನು ಆತಂಕಕ್ಕೀಡುಮಾಡಿತ್ತು. ಈಗಿನ ನೀರಿನಿಂದ ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಹಿಂಗಾರು ಬೆಳೆಗೆ ನೀರಾವರಿ ಸಾಧ್ಯವಾಗಲಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 02, 2024 | 7:24 PM

Share

ಚಾಮರಾಜನಗರ, ಡಿಸೆಂಬರ್​​ 02: ಆ ಜಲಾಶಯ ಕಳೆದ ವರ್ಷ ತುಂಬದೇ ರೈತರನ್ನು ಸಂಕಷ್ಟಕ್ಕೀಡು ಮಾಡಿತ್ತು. ಈ ವರ್ಷದ ಮುಂಗಾರು ಮಳೆಯಲ್ಲೂ ಜಲಾಶಯಕ್ಕೆ ನೀರು ಬರಲೇ ಇಲ್ಲ. ಆದರೆ ಇದೀಗ ಫೆಂಗಲ್ ಚಂಡಮಾರುತದ ಎಫೆಕ್ಟ್​ಯಿಂದಾಗಿ ಎರಡನೇ ಬಾರಿ ಸುವರ್ಣಾವತಿ ಜಲಾಶಯ (suvarnavati Dam) ತುಂಬಿದ್ದು ಸ್ಥಳೀಯ ಶಾಸಕ ಬಾಗಿನ ಅರ್ಪಿಸಿದ್ದಾರೆ.

ಎರಡನೇ ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಜಿಲ್ಲೆಯ ಸುವರ್ಣಾವತಿ ಜಲಾಶಯ ಕಳೆದ ವರ್ಷ ಅಷ್ಟೇ ಅಲ್ಲ ಮುಂಗಾರಿನಲ್ಲೂ ತುಂಬದೆ ರೈತರನ್ನು ಚಿಂತೆಗೀಡು ಮಾಡಿತ್ತು. ಆದರೆ ಜಿಲ್ಲೆಯ ಗಡಿಭಾಗ ಫೆಂಗಲ್ ಚಂಡಮಾರುತದ ಎಫೆಕ್ಟ್​ನಿಂದ ದಿಂಬಂ ಘಾಟ್‌ನಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾದ ಕಾರಣ ಸುವರ್ಣಾವತಿ ಡ್ಯಾಂ ವರ್ಷದಲ್ಲಿ ಎರಡನೇ ಬಾರಿ ತುಂಬಿದ್ದು, ಇಂದು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಬಾಗಿನವನ್ನ ಅರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ

55 ಅಡಿ ಸಾಮರ್ಥ್ಯದ ಜಲಾಶಯ ಸದ್ಯ 55 ಅಡಿ ಭರ್ತಿಯಾಗಿದೆ. ಒಳ ಹರಿವು ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ 150 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಿ ಒಳ ಹಾಗೂ ಹೊರ ಹರಿವು ಹೆಚ್ಚಳ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ.

ಸದ್ಯ ನದಿಯಿಂದ ಕರಿನಂಜನಪುರದ ದೊಡ್ಡಕೆರೆ, ಚಿಕ್ಕಕೆರೆ, ಸಿಂಡಗೆರೆ, ಬಂಡೀಗೆರೆ ನಲ್ಲೂರು, ನಾಗವಳ್ಳಿ ಸೇರಿದಂತೆ ಹತ್ತಾರು ಕೆರೆ ಕಟ್ಟೆಗಳಿಗೆ ನೀರು ಹರಿಯುತ್ತಿದ್ದು ಈ ಕೆರೆಕಟ್ಟೆಗಳು ತುಂಬತೊಡಗಿವೆ. ಇದರಿಂದ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕಿನ ಹಲವೆಡೆ ಅಂತರ್ಜಲ ವೃದ್ದಿಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಸಭೆ ವೇಳೆ ಒಳ ನುಗ್ಗಿದ ಮಳೆ ನೀರು

ಸುವರ್ಣಾವತಿ ಜಲಾಶಯ 7000 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಹಿಂಗಾರು ಬೆಳೆ ಬೆಳೆಯಲು ಜಲಾಶಯದಿಂದ ಚಾನೆಲ್‌ಗಳಿಗೆ ನೀರು ಬಿಡುಗಡೆ ಮಾಡಬೇಕು ಎಂಬುದು ರೈತರ ಆಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​