AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಮೆರವಣಿಗೆಯೊಂದಿಗೆ ಸಾಗಲಿರುವ ಚಾಮರಾಜಪೇಟೆ ಗಣೇಶ; ಅದ್ದೂರಿ ಮೆರವಣಿಗೆಗೆ ಸಕಲ ಸಿದ್ಧತೆ

ಚಾಮರಾಜಪೇಟೆ ಮೈದಾನದ ಪಕ್ಕದಲ್ಲಿ ಕೂರಿಸಿದ್ದ ಗಣೇಶನ ವಿಗ್ರಹದ ವಿಸರ್ಜನೆ ಇಂದು ನಡೆಯಲಿದ್ದು, ಅದ್ದೂರಿ ಹಾಗೂ ಬೃಹತ್ ಮೆರವಣಿಗೆ ನಡೆಸಲು ಗಣೇಶೋತ್ಸವ ಸಮಿತಿ ನಿರ್ಧರಿಸಿದೆ.

ಬೃಹತ್ ಮೆರವಣಿಗೆಯೊಂದಿಗೆ ಸಾಗಲಿರುವ ಚಾಮರಾಜಪೇಟೆ ಗಣೇಶ; ಅದ್ದೂರಿ ಮೆರವಣಿಗೆಗೆ ಸಕಲ ಸಿದ್ಧತೆ
ಚಾಮರಾಜಪೇಟೆ ಮೈದಾನ ಗಣೇಶೋತ್ಸವ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Sep 10, 2022 | 7:24 AM

Share

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಸೂಚಿಸಿದ ಪರಿಣಾಮ ಹಿಂದೂ ಸಂಘಟನೆಗಳು, ಗಣೇಶೋತ್ಸವ ಸಮಿತಿ ಮೈದಾನದ ಬಳಿ ಗಣೇಶನ ಮೂರ್ತಿಯನ್ನು ಕೂರಿಸಿದ್ದರು. ಅದರಂತೆ ಇಂದು ಅದ್ದೂರಿ ಮೆರವಣಿ ಮೂಲಕ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಬೆಂಗಳೂರು ಗಣೇಶೋತ್ಸವ ಸಮಿತಿಯು ಸಕಲ ಸಿದ್ಧತೆ ನಡೆಸಿಕೊಂಡಿದ್ದು, ಪಾದರಾಯನಪುರದಿಂದ ಮೆರವಣಿಗೆ ಆರಂಭಿಸಲು ಸಮಿತಿ ನಿರ್ಧಾರಿಸಲಾಗಿದೆ.

ವಿರೋಧದ ನಡುವೆಯೂ ಮೈದಾನದ ಎದುರು 2ನೇ ಮುಖ್ಯರಸ್ತೆಯಲ್ಲಿರುವ ಅಯ್ಯಪ್ಪ ದೇಗುಲ ಬಳಿ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಇದೀಗ ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದ್ದು, ಮೆರವಣಿಗೆ ನಡೆಸಲು ಗೃಹ ಸಚಿವರ ಅನುಮತಿ ಸಿಕ್ಕಿದೆ ಎಂದು ಬೆಂಗಳೂರು ಗಣೇಶೋತ್ಸವ ಸಮಿತಿ ಹೇಳಿಕೊಳ್ಳುತ್ತಿದೆ. ಅದರಂತೆ ಸ್ಥಳೀಯ ಪೊಲೀಸರ ವಿರೋಧದ ಮೆರವಣಿಗೆ ನಡೆಯಲಿದೆ. ಈ ವೇಳೆ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆಯೂ ಇದೆ. ಪಾದರಾಯನಪುರದಿಂದ 40ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದ್ದು, ಚಾಮರಾಜಪೇಟೆ ಮತ್ತು ಪಾದರಾಯನಪುರದಿಂದ ಏಕಕಾಲಕ್ಕೆ ಮೆರವಣಿಗೆ ಆರಂಭಗೊಳ್ಳಲಿದೆ. ಕಳೆದ 7 ದಿನಗಳಿಂದ ಗಣೇಶನ್ನು ಕೂರಿಸಿ ಪೂಜೆ ಪುನಸ್ಕಾರಗಳನ್ನು ನಡೆಸಿಕೊಂಡು ಬರಲಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಮೆರವಣಿಗೆ ಆರಂಭಗೊಳ್ಳಲಿದೆ.

ಮೆರವಣಿಗೆ ಯಾವ ಮಾರ್ಗದಲ್ಲಿ ಸಾಗಲಿದೆ?

ಚಾಮರಾಜಪೇಟೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಎಲ್ಲ ಗಣೇಶ ಮೂರ್ತಿಗಳನ್ನು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ವಿಸರ್ಜನೆ ನಡೆಸಲಾಗುತ್ತಿದೆ. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆದ ನಂತರ ಚಾಮರಾಜಪೇಟೆಯ ಗಣೇಶ ಮೂರ್ತಿಗಳು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಸೇರಲಿದೆ. ಅಲ್ಲದೆ ಪಾದರಾಯನಪುರದಿಂದ ಹೊರಟ ಮೆರವಣಿಗೆಯು ಮಧ್ಯಾಹ್ನ 2 ಗಂಟೆಗೆ ಇದೇ ವೃತ್ತದ ಬಳಿ ಬಂದು ಒಟ್ಟು ಸೇರಲಿದೆ. ಬಿನ್ನಿಪೇಟೆಯ ಮೂರ್ತಿಗಳು ಸಹ ಮೈಸೂರು ಸರ್ಕಲ್​ಗೆ ಬಂದು ಸೇರಲಿದ್ದು, ನಂತರ ಒಟ್ಟಾಗಿ ಅಲ್ಲಿಂದ ಮಧ್ಯಾಹ್ನ 2:30 ಬೃಹತ್ ಮೆರವಣಿಗೆ ಆರಂಭಗೊಳ್ಳಲಿದೆ. ನಂತರ 40ಕ್ಕೂ ಹೆಚ್ಚು ಗಣೇಶ ಮೆರವಣಿಗೆಯು ಟೌನ್ ಹಾಲ್ ಮುಂದೆ ಜಮಾಯಿಸಲಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!