Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಮೆರವಣಿಗೆಯೊಂದಿಗೆ ಸಾಗಲಿರುವ ಚಾಮರಾಜಪೇಟೆ ಗಣೇಶ; ಅದ್ದೂರಿ ಮೆರವಣಿಗೆಗೆ ಸಕಲ ಸಿದ್ಧತೆ

ಚಾಮರಾಜಪೇಟೆ ಮೈದಾನದ ಪಕ್ಕದಲ್ಲಿ ಕೂರಿಸಿದ್ದ ಗಣೇಶನ ವಿಗ್ರಹದ ವಿಸರ್ಜನೆ ಇಂದು ನಡೆಯಲಿದ್ದು, ಅದ್ದೂರಿ ಹಾಗೂ ಬೃಹತ್ ಮೆರವಣಿಗೆ ನಡೆಸಲು ಗಣೇಶೋತ್ಸವ ಸಮಿತಿ ನಿರ್ಧರಿಸಿದೆ.

ಬೃಹತ್ ಮೆರವಣಿಗೆಯೊಂದಿಗೆ ಸಾಗಲಿರುವ ಚಾಮರಾಜಪೇಟೆ ಗಣೇಶ; ಅದ್ದೂರಿ ಮೆರವಣಿಗೆಗೆ ಸಕಲ ಸಿದ್ಧತೆ
ಚಾಮರಾಜಪೇಟೆ ಮೈದಾನ ಗಣೇಶೋತ್ಸವ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Sep 10, 2022 | 7:24 AM

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಸೂಚಿಸಿದ ಪರಿಣಾಮ ಹಿಂದೂ ಸಂಘಟನೆಗಳು, ಗಣೇಶೋತ್ಸವ ಸಮಿತಿ ಮೈದಾನದ ಬಳಿ ಗಣೇಶನ ಮೂರ್ತಿಯನ್ನು ಕೂರಿಸಿದ್ದರು. ಅದರಂತೆ ಇಂದು ಅದ್ದೂರಿ ಮೆರವಣಿ ಮೂಲಕ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಬೆಂಗಳೂರು ಗಣೇಶೋತ್ಸವ ಸಮಿತಿಯು ಸಕಲ ಸಿದ್ಧತೆ ನಡೆಸಿಕೊಂಡಿದ್ದು, ಪಾದರಾಯನಪುರದಿಂದ ಮೆರವಣಿಗೆ ಆರಂಭಿಸಲು ಸಮಿತಿ ನಿರ್ಧಾರಿಸಲಾಗಿದೆ.

ವಿರೋಧದ ನಡುವೆಯೂ ಮೈದಾನದ ಎದುರು 2ನೇ ಮುಖ್ಯರಸ್ತೆಯಲ್ಲಿರುವ ಅಯ್ಯಪ್ಪ ದೇಗುಲ ಬಳಿ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಇದೀಗ ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದ್ದು, ಮೆರವಣಿಗೆ ನಡೆಸಲು ಗೃಹ ಸಚಿವರ ಅನುಮತಿ ಸಿಕ್ಕಿದೆ ಎಂದು ಬೆಂಗಳೂರು ಗಣೇಶೋತ್ಸವ ಸಮಿತಿ ಹೇಳಿಕೊಳ್ಳುತ್ತಿದೆ. ಅದರಂತೆ ಸ್ಥಳೀಯ ಪೊಲೀಸರ ವಿರೋಧದ ಮೆರವಣಿಗೆ ನಡೆಯಲಿದೆ. ಈ ವೇಳೆ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆಯೂ ಇದೆ. ಪಾದರಾಯನಪುರದಿಂದ 40ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದ್ದು, ಚಾಮರಾಜಪೇಟೆ ಮತ್ತು ಪಾದರಾಯನಪುರದಿಂದ ಏಕಕಾಲಕ್ಕೆ ಮೆರವಣಿಗೆ ಆರಂಭಗೊಳ್ಳಲಿದೆ. ಕಳೆದ 7 ದಿನಗಳಿಂದ ಗಣೇಶನ್ನು ಕೂರಿಸಿ ಪೂಜೆ ಪುನಸ್ಕಾರಗಳನ್ನು ನಡೆಸಿಕೊಂಡು ಬರಲಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಮೆರವಣಿಗೆ ಆರಂಭಗೊಳ್ಳಲಿದೆ.

ಮೆರವಣಿಗೆ ಯಾವ ಮಾರ್ಗದಲ್ಲಿ ಸಾಗಲಿದೆ?

ಚಾಮರಾಜಪೇಟೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಎಲ್ಲ ಗಣೇಶ ಮೂರ್ತಿಗಳನ್ನು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ವಿಸರ್ಜನೆ ನಡೆಸಲಾಗುತ್ತಿದೆ. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆದ ನಂತರ ಚಾಮರಾಜಪೇಟೆಯ ಗಣೇಶ ಮೂರ್ತಿಗಳು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಸೇರಲಿದೆ. ಅಲ್ಲದೆ ಪಾದರಾಯನಪುರದಿಂದ ಹೊರಟ ಮೆರವಣಿಗೆಯು ಮಧ್ಯಾಹ್ನ 2 ಗಂಟೆಗೆ ಇದೇ ವೃತ್ತದ ಬಳಿ ಬಂದು ಒಟ್ಟು ಸೇರಲಿದೆ. ಬಿನ್ನಿಪೇಟೆಯ ಮೂರ್ತಿಗಳು ಸಹ ಮೈಸೂರು ಸರ್ಕಲ್​ಗೆ ಬಂದು ಸೇರಲಿದ್ದು, ನಂತರ ಒಟ್ಟಾಗಿ ಅಲ್ಲಿಂದ ಮಧ್ಯಾಹ್ನ 2:30 ಬೃಹತ್ ಮೆರವಣಿಗೆ ಆರಂಭಗೊಳ್ಳಲಿದೆ. ನಂತರ 40ಕ್ಕೂ ಹೆಚ್ಚು ಗಣೇಶ ಮೆರವಣಿಗೆಯು ಟೌನ್ ಹಾಲ್ ಮುಂದೆ ಜಮಾಯಿಸಲಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ