AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ -3; ಎಲ್ಲವೂ ಅಂದುಕೊಂಡಂತೆಯೇ ಸಾಗುತ್ತಿದೆ, ಪ್ರಗ್ಯಾನ್ ರೋವರ್ ಅನ್ವೇಷಣೆ ಪ್ರಾರಂಭಿಸಿದೆ; ಇಸ್ರೋ

ಲ್ಯಾಂಡಿಂಗ್ ಆದ ಒಂದು ದಿನದ ನಂತರ ಇದೀಗ, ಎಲ್ಲಾ ವ್ಯವಸ್ಥೆಗಳು ಸಹಜವಾಗಿವೆ ಮತ್ತು ಎಲ್ಲಾ ಚಟುವಟಿಕೆಗಳು ಪೂರ್ವನಿಗದಿಯಂತೆಯೇ ನಡೆಯುತ್ತಿವೆ ಎಂದು ಇಸ್ರೋ ದೃಢಪಡಿಸಿದೆ. ಪ್ರಗ್ಯಾನ್ ರೋವರ್ (Pragyan rover) ಚಂದ್ರನ ಅನ್ವೇಷಣೆಯನ್ನು ಪ್ರಾರಂಭಿಸಿದೆ ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿದೆ.

ಚಂದ್ರಯಾನ -3; ಎಲ್ಲವೂ ಅಂದುಕೊಂಡಂತೆಯೇ ಸಾಗುತ್ತಿದೆ, ಪ್ರಗ್ಯಾನ್ ರೋವರ್ ಅನ್ವೇಷಣೆ ಪ್ರಾರಂಭಿಸಿದೆ; ಇಸ್ರೋ
ಚಂದ್ರಯಾನ -3
Ganapathi Sharma
|

Updated on: Aug 24, 2023 | 7:56 PM

Share

ಬೆಂಗಳೂರು, ಆಗಸ್ಟ್ 24: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ (Chandrayaan-3 Mission) ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಇಳಿದ ಒಂದು ದಿನದ ನಂತರ, ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಇಸ್ರೋ (ISRO) ತಿಳಿಸಿದೆ. ಚಂದ್ರಯಾನ -3 ರ ಅಡಿಯಲ್ಲಿ ಸಂಶೋಧನೆ ಪೂರ್ವನಿಗದಿಯಂತೆಯೇ ಸಾಗುತ್ತಿದೆ. ಅಲ್ಲದೆ, ಪ್ರಗ್ಯಾನ್ ರೋವರ್ (Pragyan rover) ಚಂದ್ರನ ಅನ್ವೇಷಣೆಯನ್ನು ಪ್ರಾರಂಭಿಸಿದೆ ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ರ ಬಾಹ್ಯಾಕಾಶ ನೌಕೆಯ ವಿಕ್ರಂ ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿ ಇತಿಹಾಸವನ್ನು ಬರೆದಿದೆ. ವಿಕ್ರಮ್ ಲ್ಯಾಂಡರ್ ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಮಾಡಿತು. ಈ ಕಾರ್ಯಾಚರಣೆಯ ಯಶಸ್ಸಿನೊಂದಿಗೆ, ಚಂದ್ರನ ದಕ್ಷಿಣ ಧ್ರುವದ ಬಳಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಷ್ಟೇ ಅಲ್ಲದೆ, ಯುನೈಟೆಡ್ ಸ್ಟೇಟ್ಸ್, ಸೋವಿಯತ್ ಒಕ್ಕೂಟ ಮತ್ತು ಚೀನಾ ನಂತರ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಅನ್ನು ಪೂರ್ಣಗೊಳಿಸಿದ ದೇಶವಾಗಿ ಭಾರತ ಹೊರಹೊಮ್ಮಿದೆ.

ಲ್ಯಾಂಡಿಂಗ್ ಆದ ಒಂದು ದಿನದ ನಂತರ ಇದೀಗ, ಎಲ್ಲಾ ವ್ಯವಸ್ಥೆಗಳು ಸಹಜವಾಗಿವೆ ಮತ್ತು ಎಲ್ಲಾ ಚಟುವಟಿಕೆಗಳು ಪೂರ್ವನಿಗದಿಯಂತೆಯೇ ನಡೆಯುತ್ತಿವೆ ಎಂದು ಇಸ್ರೋ ದೃಢಪಡಿಸಿದೆ.

ಈ ಮಧ್ಯೆ, ಇಸ್ರೋ ವಿಜ್ಞಾನಿಗಳ ಸಾಧನೆಗೆ ವಿಶ್ವದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ ಎಂದು ವಿವರಿಸಿದ ಇಸ್ರೋ ಮುಖ್ಯಸ್ಥ

ಪ್ರಧಾನಿ ನರೇಂದ್ರ ಮೋದಿ ಅವರೂ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. 2019ರಲ್ಲಿ ಚಂದ್ರಯಾನ 2ರ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವೇಳೆಯೂ ಪ್ರಧಾನಿ ಮೋದಿ ಇಸ್ರೋ ಪ್ರಧಾನ ಕಚೇರಿಯಲ್ಲಿದ್ದರು. ದುರದೃಷ್ಟವಶಾತ್, ಆ ಪ್ರಯತ್ನ ಫಲಿಸಿರಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ