AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೇ ಚಂದ್ರಯಾನ 3, ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಜ್ಜಾಗಿದ್ದೇವೆ- ಶಿವನ್

ಬೆಂಗಳೂರು: 2019ರಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ಚಂದ್ರಯಾನ 2 ಯೋಜನೆ ಕೊನೆ ಕ್ಷಣದಲ್ಲಿ ವೈಫಲ್ಯ ಕಂಡಿತ್ತು. ಆದ್ರೆ ಇದೀಗ ಮತ್ತೆ ಚಂದ್ರಯಾನ 3 ಯೋಜನೆ ಮಾಡುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ. ನಾವು ಚಂದ್ರಯಾನ 2 ಯೋಜನೆಯನ್ನು ಸಂಪೂರ್ಣಗೊಳಿಸಿದ್ದೇವೆ. ಆದ್ರೆ ಸಾಫ್ಟ್ ಲ್ಯಾಂಡಿಂಗ್ ಮಾತ್ರ ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ. ನಾವು ಸದ್ಯದಲ್ಲೇ ಇಂಟರ್‌ನೆಟ್ ಮೊಬೈಲ್ ಜಿಪಿಎಸ್ ಮಾಡುತ್ತೇವೆ. ಚಂದ್ರಯಾನ 2 ರಲ್ಲಿ ಲ್ಯಾಂಡಿಗ್ ವೇಳೆ ಸಮಸ್ಯೆಯಾಗಿತ್ತು. ನ್ಯಾವಿಗೇಷನ್ ಕಂಟ್ರೋಲ್ ಸಿಸ್ಟಮ್‌ ಹ್ಯಾಂಡಲ್ ಮಾಡಲು ಸಾಧ್ಯವಾಗಲಿಲ್ಲ ಎಂದರು. ಚಂದ್ರಯಾನ 3 […]

ಈ ವರ್ಷವೇ ಚಂದ್ರಯಾನ 3,  ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಜ್ಜಾಗಿದ್ದೇವೆ- ಶಿವನ್
ಸಾಧು ಶ್ರೀನಾಥ್​
|

Updated on:Jan 01, 2020 | 1:43 PM

Share

ಬೆಂಗಳೂರು: 2019ರಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ಚಂದ್ರಯಾನ 2 ಯೋಜನೆ ಕೊನೆ ಕ್ಷಣದಲ್ಲಿ ವೈಫಲ್ಯ ಕಂಡಿತ್ತು. ಆದ್ರೆ ಇದೀಗ ಮತ್ತೆ ಚಂದ್ರಯಾನ 3 ಯೋಜನೆ ಮಾಡುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ.

ನಾವು ಚಂದ್ರಯಾನ 2 ಯೋಜನೆಯನ್ನು ಸಂಪೂರ್ಣಗೊಳಿಸಿದ್ದೇವೆ. ಆದ್ರೆ ಸಾಫ್ಟ್ ಲ್ಯಾಂಡಿಂಗ್ ಮಾತ್ರ ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ. ನಾವು ಸದ್ಯದಲ್ಲೇ ಇಂಟರ್‌ನೆಟ್ ಮೊಬೈಲ್ ಜಿಪಿಎಸ್ ಮಾಡುತ್ತೇವೆ. ಚಂದ್ರಯಾನ 2 ರಲ್ಲಿ ಲ್ಯಾಂಡಿಗ್ ವೇಳೆ ಸಮಸ್ಯೆಯಾಗಿತ್ತು. ನ್ಯಾವಿಗೇಷನ್ ಕಂಟ್ರೋಲ್ ಸಿಸ್ಟಮ್‌ ಹ್ಯಾಂಡಲ್ ಮಾಡಲು ಸಾಧ್ಯವಾಗಲಿಲ್ಲ ಎಂದರು.

ಚಂದ್ರಯಾನ 3 ಯೋಜನೆ: 2020 ರಲ್ಲಿ ನಮ್ಮ ಮುಖ್ಯ ಯೋಜನೆ ಚಂದ್ರಯಾನ 3. ಈ ಯೋಜನೆ ಸಹ ಚಂದ್ರಯಾನ 2ರಂತೆಯೇ ಇದೆ. ಚಂದ್ರಯಾನ 2ರಲ್ಲಿನ ಲ್ಯಾಂಡರ್ ಹಾಗೂ ರೋವರ್​ ಅನ್ನು ಚಂದ್ರಯಾನ 3 ರಲ್ಲೂ ಬಳಸುತ್ತಿದ್ದೇವೆ. ಈ ಬಾರಿ ರೋವರ್ ಹಾಗೂ ಲ್ಯಾಂಡರ್ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕೆ.ಶಿವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜ.26ಕ್ಕೆ ಗಗನಯಾನ ಮಿಷನ್ ಆರಂಭ: ಹೊಸ ವರ್ಷಕ್ಕೆ ಶುಭಾಷಯ ಕೋರಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ಸುದ್ದಿಗೋಷ್ಠಿಯಲ್ಲಿ 2020ರ ಇಸ್ರೋದ ಕಾರ್ಯಚಟುವಟಿಕೆಗಳ ವಿವರಣೆ ನೀಡಿದರು. ಜನವರಿ 26ರಂದು‌ ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆ ಗಗನಯಾನ ಮಿಷನ್ ಆರಂಭವಾಗಲಿದೆ. ಗಗನಯಾತ್ರಿಗಳನ್ನು ಸ್ಪೇಸ್​ಗೆ ಕಳುಹಿಸಲು ಪೂರಕ ತರಬೇತಿ ನೀಡಲಾಗುತ್ತಿದೆ. ತಮಿಳುನಾಡಿನ ತೂತುಕುಡಿಯಲ್ಲಿ ಇದ್ರ ಕಾರ್ಯ ಆರಂಭವಾಗಿದೆ. ರಷ್ಯಾದಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗುತ್ತದೆ. ನಾಲ್ವರು ಪುರುಷ ಯಾತ್ರಿಗಳಿಗೆ ಅಲ್ಲಿಯೇ ಎಲ್ಲಾ ಟೆಸ್ಟ್‌ಗಳನ್ನು ಮಾಡಿಸುತ್ತಿದ್ದೇವೆ. IAFನಿಂದ ಯಾತ್ರಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

Published On - 1:30 pm, Wed, 1 January 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್