AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ

Ananth Kumar Hegde Constitution Remark: ಸಂಸದ ಅನಂತ ಕುಮಾರ ಹೆಗಡೆ ಮತ್ತೆ ಸಂವಿಧಾನ ಬದಲಾವಣೆಯ ಮಾತನ್ನ ಆಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸೀಟು ಗೆಲ್ಲಬೇಕು, ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ರೆ. ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ, ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಹೇಳಿದ್ದಾರೆ. ಇದೀಗ ಹೆಗಡೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಹೆಗಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದಕ್ಕೆ ಅನಂತ ಕುಮಾರ್ ಹೆಗಡೆ ನಾಲಿಗೆ ಹರಿಬಿಟ್ಟಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ  ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ
ಸಂಸದ ಅನಂತಕುಮಾರ್​ ಹೆಗಡೆ
TV9 Web
| Edited By: |

Updated on: Mar 11, 2024 | 3:31 PM

Share

ಕಾರವಾರ, (ಮಾರ್ಚ್ 11): ಸಂಸದ ಅನಂತ ಕುಮಾರ ಹೆಗಡೆ (Ananth Kumar Hegde ) ಮತ್ತೆ ಸಂವಿಧಾನ ಬದಲಾವಣೆಯ(Change Constitution Remark) ಮಾತನ್ನ ಆಡಿದ್ದು, ಇದಕ್ಕೆ ಇದೀಗ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಅವರ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. ಈ ಮುಜುಗರ ತಾಳಲಾರದೇ ಅನುಂತಕುಮಾರ್ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡು ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಹೆಗಡೆ, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನಿವೆಲ್ಲ ಇದಕ್ಕೆ ವಿಚಲಿತರಾಗಬಾರರು. ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಎನೆನೋ ಹೇಳಿದ್ರು ಎಂದು ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೊಮ್ಮೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ,

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?