AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ

Ananth Kumar Hegde Constitution Remark: ಸಂಸದ ಅನಂತ ಕುಮಾರ ಹೆಗಡೆ ಮತ್ತೆ ಸಂವಿಧಾನ ಬದಲಾವಣೆಯ ಮಾತನ್ನ ಆಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸೀಟು ಗೆಲ್ಲಬೇಕು, ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ರೆ. ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ, ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಹೇಳಿದ್ದಾರೆ. ಇದೀಗ ಹೆಗಡೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಹೆಗಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದಕ್ಕೆ ಅನಂತ ಕುಮಾರ್ ಹೆಗಡೆ ನಾಲಿಗೆ ಹರಿಬಿಟ್ಟಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ  ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ
ಸಂಸದ ಅನಂತಕುಮಾರ್​ ಹೆಗಡೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 11, 2024 | 3:31 PM

ಕಾರವಾರ, (ಮಾರ್ಚ್ 11): ಸಂಸದ ಅನಂತ ಕುಮಾರ ಹೆಗಡೆ (Ananth Kumar Hegde ) ಮತ್ತೆ ಸಂವಿಧಾನ ಬದಲಾವಣೆಯ(Change Constitution Remark) ಮಾತನ್ನ ಆಡಿದ್ದು, ಇದಕ್ಕೆ ಇದೀಗ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಅವರ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. ಈ ಮುಜುಗರ ತಾಳಲಾರದೇ ಅನುಂತಕುಮಾರ್ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡು ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಹೆಗಡೆ, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನಿವೆಲ್ಲ ಇದಕ್ಕೆ ವಿಚಲಿತರಾಗಬಾರರು. ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಎನೆನೋ ಹೇಳಿದ್ರು ಎಂದು ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೊಮ್ಮೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ,

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ