AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?

ನಾಳೆ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Jun 04, 2022 | 3:56 PM

Share

ಬೆಂಗಳೂರು: ನಾಳೆ ಯುಪಿಎಸ್​ಸಿ (UPSC) ಪ್ರಿಲಿಮಿನರಿ ಪರೀಕ್ಷೆ (Preliminary Examination) ನಡೆಯುವ ಹಿನ್ನೆಲೆ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎಂದಿನಂತೆ ಭಾನುವಾರ 7 ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೊ ಸಂಚಾರಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಭಾನುವಾರ (ಜೂ.5)ರಂದು ನೇರಳೆ ಮತ್ತು ಹಸಿರು ಮೆಟ್ರೋ ಮಾರ್ಗದಲ್ಲಿ  ಬೆಳಗ್ಗೆ 6 ಗಂಟೆಗೆ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ. ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: UPSC Results 2021 Topper : ದೇಶಕ್ಕೆ ಪ್ರಥಮ ಸ್ಥಾನ ಪಡೆದ ಶ್ರುತಿ ಶರ್ಮಾ ಕುರಿತು ಇಲ್ಲಿದೆ ಮಾಹಿತಿ

2022ನೇ ಸಾಲಿನ ಐಎಎಸ್​​, ಐಪಿಎಸ್ ಸೇರಿದಂತೆ ಇನ್ನಿತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು ಮತ್ತು ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಪೂರ್ವಭಾವಿ ಪರೀಕ್ಷೆ ಜೂ.5ರಂದು  ನಡೆಯಲಿದ್ದು, ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ನೇಮಕಾತಿಯು ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆದು ನಂತರ ಮುಖ್ಯ ಪರೀಕ್ಷೆ ನಡೆಯಲಿದೆ. ಬಳಿಕ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: KCET Hall Ticket 2022: ವಿದ್ಯಾರ್ಥಿಗಳೇ ಗಮನಿಸಿ; ಸಿಇಟಿ ಪರೀಕ್ಷೆಯ ಹಾಲ್ ​ಟಿಕೆಟ್ ಬಿಡುಗಡೆ; ಡೌನ್​ಲೋಡ್​ ಮಾಡುವ ವಿಧಾನ ಇಲ್ಲಿದೆ

ಇದನ್ನೂ ಓದಿ: UPSC Exam: ಯುಪಿಎಸ್​ಸಿ ಪರೀಕ್ಷೆ ಕ್ಲಿಯರ್ ಮಾಡಲು ಇಲ್ಲಿವೆ ಟಿಪ್ಸ್..

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sat, 4 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ