AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ
ಡಿ.ಕೆ.ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Apr 03, 2024 | 8:38 PM

Share

ಬೆಂಗಳೂರು, ಮಾರ್ಚ್​ 03: ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಿದ್ದು, ಹೊಸದಾಗಿ ಕೆಲವು ನಾಯಕರ ಹೆಸರನ್ನು ಸೇರಿಸಲಾಗಿದೆ. ಪ್ರಧಾನ ಕಾರ್ಯದರ್ಶಿ 138 ಇದ್ದಿದ್ದನ್ನು 140ಕ್ಕೆ ಹೆಚ್ಚಿಸಿ ಎಐಸಿಸಿ ಆದೇಶ ಹೊರಡಿಸಿದೆ.

ರಾಜಾಜಿನಗರದ ರಘುವೀರ್ ಗೌಡ ಬಿಟ್ಟು ಭವ್ಯಾ ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. B.R.ನಾಯ್ಡು, ಶಿವಕುಮಾರ್, ಸಂಜಯ್ ಜಾಗಿದಾರ್, ಸುಶುತ್ ಗೌಡ, ರಾಬರ್ಟ್ ದೊಡ್ಡಪುರ, ಅನಿಲ್ ಕುಮಾರ್​ಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಕೆಪಿಸಿಸಿ ನೂತನ ತಂಡ ರಚನೆ: 7 ಜಿಲ್ಲಾಧ್ಯಕ್ಷ, ರಾಜ್ಯ ಉಪಾಧ್ಯಕ್ಷರ ನೇಮಕ: ಇಲ್ಲಿದೆ ನೂತನ ಪದಾಧಿಕಾರಿಗಳ ಪಟ್ಟಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಇತ್ತೀಚೆಗೆ ಮಹತ್ವದ ಬದಲಾವಣೆ ಮಾಡಲಾಗಿತ್ತು. ಹಳೆಬರನ್ನು ಕೈಬಿಟ್ಟು ಹೊಸ-ಹೊಸ ಮುಖಗಳಿಗೆ ಕೆಪಿಸಿಸಿ ನೂತನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಬಂದ್ರೆ ರಾಜ್ಯಾಧ್ಯಕ್ಷ ಬದಲಾವಣೆ: ಅಂತೆ-ಕಂತೆಗಳಿಗೆ ಉಸ್ತುವಾರಿ ಸ್ಪಷ್ಟನೆ

43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿತ್ತು. ಇದರ ಜೊತೆಗೆ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದರೆ, ಸಾಮಾಜಿಕ‌ ಜಾಲತಾಣ ಸಹ – ಮುಖ್ಯಸ್ಥರಾಗಿ ವಿನಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ಅವರನ್ನು ನೇಮಿಸಲಾಗಿತ್ತು. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ಅವರನ್ನ ನೇಮಕ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.