AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ವ್ಯತ್ಯಯ, ಹಲವು ರೈಲು ರದ್ದು, ಕೆಲವರ ಮಾರ್ಗ ಬದಲಾವಣೆ; ಇಲ್ಲಿದೆ ವಿವರ

ಹುಬ್ಬಳ್ಳಿ - ಚಿಕ್ಕಜಾಜೂರು ಭಾಗದ ರೈಲು ಹಳಿಯ ಜೋಡಿ ಮಾರ್ಗ ಎರಡನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ಮುಂದಿನ ಕೆಲವು ದಿನಗಳವರೆಗೆ ವ್ಯತ್ಯಯವಾಗಲಿದೆ. ರೈಲು ರದ್ದು, ಮಾರ್ಗ ಬದಲಾವಣೆ ಹಾಗೂ ಭಾಗಶಃ ರದ್ದತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು - ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ವ್ಯತ್ಯಯ, ಹಲವು ರೈಲು ರದ್ದು, ಕೆಲವರ ಮಾರ್ಗ ಬದಲಾವಣೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 01, 2023 | 9:00 PM

Share

ಬೆಂಗಳೂರು: ಹುಬ್ಬಳ್ಳಿ – ಚಿಕ್ಕಜಾಜೂರು ಭಾಗದ (Chikjajur-Hubballi section) ರೈಲು ಹಳಿಯ ಜೋಡಿ ಮಾರ್ಗ ಎರಡನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ (Train Service) ಮುಂದಿನ ಕೆಲವು ದಿನಗಳವರೆಗೆ ವ್ಯತ್ಯಯವಾಗಲಿದೆ. ಕೆಲವು ರೈಲುಗಳ ಸಂಚಾರ ರದ್ದಾಗಿದ್ದರೆ, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹಿಗಾಗಿ ಬೆಂಗಳೂರು – ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಪ್ರಯಾಣ ಮಾಡುವವರು ಮೊದಲೇ ರದ್ದಾಗಿರುವ, ಮಾರ್ಗ ಬದಲಾವಣೆಯಾಗಿರುವ ರೈಲುಗಳ ವಿವರ ತಿಳಿದುಕೊಂಡು ಯೋಜನೆ ರೂಪಿಸಿಕೊಳ್ಳುವುದು ಉತ್ತಮ. ರೈಲು ರದ್ದು, ಮಾರ್ಗ ಬದಲಾವಣೆ ಹಾಗೂ ಭಾಗಶಃ ರದ್ದತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

  1. ರೈಲು ಸಂಖ್ಯೆ 16214 ಎಸ್​ಎಸ್​ಎಸ್ ಹುಬ್ಬಳ್ಳಿ ಅರಸೀಕೆರೆ ಡೈಲಿ ಎಕ್ಸ್​​ಪ್ರೆಸ್​ ಸಂಚಾರ ಮಾರ್ಚ್​ 4ರ ವರೆಗೆ ರದ್ದಾಗಿದೆ.
  2. ರೈಲು ಸಂಖ್ಯೆ 16213 ಅರಸೀಕೆರೆ ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​​ಪ್ರೆಸ್​ ಸಂಚಾರ ಮಾರ್ಚ್​ 1ರಿಂದ ರದ್ದಾಗಿದೆ.
  3. ರೈಲು ಸಂಖ್ಯೆ 17347/48 ಎಸ್​ಎಸ್​ಎಸ್ ಹುಬ್ಬಳ್ಳಿ – ಚಿತ್ರದುರ್ಗ ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​​ಪ್ರೆಸ್ ಸಂಚಾರ ಮಾರ್ಚ್​ 4ರ ವರೆಗೆ ರದ್ದಾಗಿದೆ.
  4. ರೈಲು ಸಂಖ್ಯೆ 12079 ಕೆಎಸ್​ಆರ್ ಬೆಂಗಳೂರು – ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಜನಶತಾಬ್ಧಿ ಎಕ್ಸ್​ಪ್ರೆಸ್ ಸಂಚಾರ ಮಾರ್ಚ್​ 1ರಿಂದ 4ರ ವರೆಗೆ ಹರಿಹರ – ಹುಬ್ಬಳ್ಳಿ ಮಧ್ಯೆ ಭಾಗಶಃ ರದ್ದಾಗಿರುತ್ತದೆ.
  5. ರೈಲು ಸಂಖ್ಯೆ 12080 ಎಸ್​ಎಸ್​ಎಸ್ ಹುಬ್ಬಳ್ಳಿ – ಕೆಎಸ್​ಆರ್ ಬೆಂಗಳೂರು ಜನಶತಾಬ್ಧಿ ಎಕ್ಸ್​ಪ್ರೆಸ್ ಸಂಚಾರ ಭಾಗಶಃ ರದ್ದಾಗಿದೆ.
  6. ರೈಲು ಸಂಖ್ಯೆ 11021 ದಾದರ್ ತಿರುನ್ವೇಲಿ ಟ್ರಿ-ವೀಕ್ಲಿ ಎಕ್ಸ್​​ಪ್ರೆಸ್ ಮಾರ್ಚ್​ 1ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  7. ರೈಲು ಸಂಖ್ಯೆ 11035 ದಾದರ್ – ಮೈಸೂರು ಶರಾವತಿ ವಾರದ ಎಕ್ಸ್​​ಪ್ರೆಸ್ ಮಾರ್ಚ್​ 2ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  8. ರೈಲು ಸಂಖ್ಯೆ 16507 ಜೋಧಪುರ – ಕೆಎಸ್​ಆರ್ ಬೆಂಗಳೂರು ಬೈ ವೀಕ್ಲಿ ಎಕ್ಸ್​ಪ್ರೆಸ್ ಮಾರ್ಚ್ 2ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  9. ರೈಲು ಸಂಖ್ಯೆ 16209 ಅಜ್ಮೇರ್ – ಮೈಸೂರು ಬೈ ವೀಕ್ಲಿ ಎಕ್ಸ್​ಪ್ರೆಸ್ ಕೂಡ ಮಾರ್ಚ್ 3ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  10. ರೈಲು ಸಂಖ್ಯೆ 11005 ದಾದರ್ – ಪುದುಚೇರಿ ಟ್ರಿ ವೀಕ್ಲಿ ಎಕ್ಸ್​ಪ್ರೆಸ್, ರೈಲು ಸಂಖ್ಯೆ 20656 ಎಸ್​ಎಸ್​ಎಸ್ ಹುಬ್ಬಳ್ಳಿ – ಯಶವಂತಪುರ ವೀಕ್ಲಿ ಎಕ್ಸ್​ಪ್ರೆಸ್ ಮಾರ್ಚ್ 4ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!