AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ವ್ಯತ್ಯಯ, ಹಲವು ರೈಲು ರದ್ದು, ಕೆಲವರ ಮಾರ್ಗ ಬದಲಾವಣೆ; ಇಲ್ಲಿದೆ ವಿವರ

ಹುಬ್ಬಳ್ಳಿ - ಚಿಕ್ಕಜಾಜೂರು ಭಾಗದ ರೈಲು ಹಳಿಯ ಜೋಡಿ ಮಾರ್ಗ ಎರಡನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ಮುಂದಿನ ಕೆಲವು ದಿನಗಳವರೆಗೆ ವ್ಯತ್ಯಯವಾಗಲಿದೆ. ರೈಲು ರದ್ದು, ಮಾರ್ಗ ಬದಲಾವಣೆ ಹಾಗೂ ಭಾಗಶಃ ರದ್ದತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು - ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ವ್ಯತ್ಯಯ, ಹಲವು ರೈಲು ರದ್ದು, ಕೆಲವರ ಮಾರ್ಗ ಬದಲಾವಣೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 01, 2023 | 9:00 PM

ಬೆಂಗಳೂರು: ಹುಬ್ಬಳ್ಳಿ – ಚಿಕ್ಕಜಾಜೂರು ಭಾಗದ (Chikjajur-Hubballi section) ರೈಲು ಹಳಿಯ ಜೋಡಿ ಮಾರ್ಗ ಎರಡನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ (Train Service) ಮುಂದಿನ ಕೆಲವು ದಿನಗಳವರೆಗೆ ವ್ಯತ್ಯಯವಾಗಲಿದೆ. ಕೆಲವು ರೈಲುಗಳ ಸಂಚಾರ ರದ್ದಾಗಿದ್ದರೆ, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹಿಗಾಗಿ ಬೆಂಗಳೂರು – ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಪ್ರಯಾಣ ಮಾಡುವವರು ಮೊದಲೇ ರದ್ದಾಗಿರುವ, ಮಾರ್ಗ ಬದಲಾವಣೆಯಾಗಿರುವ ರೈಲುಗಳ ವಿವರ ತಿಳಿದುಕೊಂಡು ಯೋಜನೆ ರೂಪಿಸಿಕೊಳ್ಳುವುದು ಉತ್ತಮ. ರೈಲು ರದ್ದು, ಮಾರ್ಗ ಬದಲಾವಣೆ ಹಾಗೂ ಭಾಗಶಃ ರದ್ದತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

  1. ರೈಲು ಸಂಖ್ಯೆ 16214 ಎಸ್​ಎಸ್​ಎಸ್ ಹುಬ್ಬಳ್ಳಿ ಅರಸೀಕೆರೆ ಡೈಲಿ ಎಕ್ಸ್​​ಪ್ರೆಸ್​ ಸಂಚಾರ ಮಾರ್ಚ್​ 4ರ ವರೆಗೆ ರದ್ದಾಗಿದೆ.
  2. ರೈಲು ಸಂಖ್ಯೆ 16213 ಅರಸೀಕೆರೆ ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​​ಪ್ರೆಸ್​ ಸಂಚಾರ ಮಾರ್ಚ್​ 1ರಿಂದ ರದ್ದಾಗಿದೆ.
  3. ರೈಲು ಸಂಖ್ಯೆ 17347/48 ಎಸ್​ಎಸ್​ಎಸ್ ಹುಬ್ಬಳ್ಳಿ – ಚಿತ್ರದುರ್ಗ ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​​ಪ್ರೆಸ್ ಸಂಚಾರ ಮಾರ್ಚ್​ 4ರ ವರೆಗೆ ರದ್ದಾಗಿದೆ.
  4. ರೈಲು ಸಂಖ್ಯೆ 12079 ಕೆಎಸ್​ಆರ್ ಬೆಂಗಳೂರು – ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಜನಶತಾಬ್ಧಿ ಎಕ್ಸ್​ಪ್ರೆಸ್ ಸಂಚಾರ ಮಾರ್ಚ್​ 1ರಿಂದ 4ರ ವರೆಗೆ ಹರಿಹರ – ಹುಬ್ಬಳ್ಳಿ ಮಧ್ಯೆ ಭಾಗಶಃ ರದ್ದಾಗಿರುತ್ತದೆ.
  5. ರೈಲು ಸಂಖ್ಯೆ 12080 ಎಸ್​ಎಸ್​ಎಸ್ ಹುಬ್ಬಳ್ಳಿ – ಕೆಎಸ್​ಆರ್ ಬೆಂಗಳೂರು ಜನಶತಾಬ್ಧಿ ಎಕ್ಸ್​ಪ್ರೆಸ್ ಸಂಚಾರ ಭಾಗಶಃ ರದ್ದಾಗಿದೆ.
  6. ರೈಲು ಸಂಖ್ಯೆ 11021 ದಾದರ್ ತಿರುನ್ವೇಲಿ ಟ್ರಿ-ವೀಕ್ಲಿ ಎಕ್ಸ್​​ಪ್ರೆಸ್ ಮಾರ್ಚ್​ 1ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  7. ರೈಲು ಸಂಖ್ಯೆ 11035 ದಾದರ್ – ಮೈಸೂರು ಶರಾವತಿ ವಾರದ ಎಕ್ಸ್​​ಪ್ರೆಸ್ ಮಾರ್ಚ್​ 2ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  8. ರೈಲು ಸಂಖ್ಯೆ 16507 ಜೋಧಪುರ – ಕೆಎಸ್​ಆರ್ ಬೆಂಗಳೂರು ಬೈ ವೀಕ್ಲಿ ಎಕ್ಸ್​ಪ್ರೆಸ್ ಮಾರ್ಚ್ 2ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  9. ರೈಲು ಸಂಖ್ಯೆ 16209 ಅಜ್ಮೇರ್ – ಮೈಸೂರು ಬೈ ವೀಕ್ಲಿ ಎಕ್ಸ್​ಪ್ರೆಸ್ ಕೂಡ ಮಾರ್ಚ್ 3ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು ಹಾಗೂ ಹರಿಹರ ಮೂಲಕ ತೆರಳುವುದಿಲ್ಲ.
  10. ರೈಲು ಸಂಖ್ಯೆ 11005 ದಾದರ್ – ಪುದುಚೇರಿ ಟ್ರಿ ವೀಕ್ಲಿ ಎಕ್ಸ್​ಪ್ರೆಸ್, ರೈಲು ಸಂಖ್ಯೆ 20656 ಎಸ್​ಎಸ್​ಎಸ್ ಹುಬ್ಬಳ್ಳಿ – ಯಶವಂತಪುರ ವೀಕ್ಲಿ ಎಕ್ಸ್​ಪ್ರೆಸ್ ಮಾರ್ಚ್ 4ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊತ್ತನೂರು, ಅಮರಾವತಿ ಕಾಲೊನಿ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ