AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ

ಚನ್ನಪಟ್ಟಣದ ಉಪಚುನಾವಣೆಯ ಪ್ರಚಾರದ ವೇಳೆ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಈಗ ತಾನೆ ನನ್ನ ತಾಲೂಕಿಗೆ ಬಂದಿದ್ದಾರೆ. ಏನೂ ಪರಿಚಯವಿಲ್ಲದೆ ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್ ಎಂದು ಕಿಡಿಕಾರಿದ್ದಾರೆ.

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ
ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲ್ತಿರುವಾಗ ಕೊನೆ ಅಸ್ತ್ರವೇ ಕಣ್ಣೀರು: ನಿಖಿಲ್ ಬಗ್ಗೆ ಯೋಗೇಶ್ವರ್ ವ್ಯಂಗ್ಯ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 01, 2024 | 5:55 PM

Share

ರಾಮನಗರ, ನವೆಂಬರ್ 01: ಇಂದು ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ (CP Yogeshwara) ವ್ಯಂಗ್ಯವಾಡಿದ್ದಾರೆ. ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲುತ್ತಿರುವಾಗ ಅವನ ಕೊನೆ ಅಸ್ತ್ರವೇ ಕಣ್ಣೀರು. ಒಬ್ಬ ನಾಯಕ ಜನರ ಕಣ್ಣೀರು ಒರೆಸಬೇಕೇ ವಿನಃ, ಕಣ್ಣೀರು ಹಾಕಬಾರದು ಎಂದು ಕಿಡಿಕಾರಿದ್ದಾರೆ.

ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅವ್ವೇರಹಳ್ಳಿಯಲ್ಲಿ ಟಿವಿ9 ಜೊತೆಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಈಗ ತಾನೆ ನನ್ನ ತಾಲೂಕಿಗೆ ಬಂದಿದ್ದಾರೆ. ಏನೂ ಪರಿಚಯವಿಲ್ಲದೆ ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್.​ ಯಾವುದೇ ಅಭ್ಯರ್ಥಿ ಕಣ್ಣೀರು ಹಾಕಿ ಮತದಾರರ ಮನಸ್ಸು ಗೆಲ್ಲಲು ಆಗಲ್ಲ. ಅವರ ತಂದೆ ಮಾಡಿದ ಅವ್ಯವಸ್ಥೆಗೆ ಸಾವಿರಾರು ಜನ ಕಣ್ಣೀರಾಕುತ್ತಿದ್ದಾರೆ. ಕಣ್ಣೀರಿಡುವುದು ಒಬ್ಬ ನಾಯಕನ ಗುಣವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ ನಿಖಿಲ್ ಕುಮಾರಸ್ವಾಮಿ

ಉಪ ಚುನಾವಣೆ ನನಗೆ ಹಬ್ಬದ ಚುನಾವಣೆ, ಜನ ಬೆಂಬಲಿಸುತ್ತಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಡಳಿತ ದೌರ್ಬಲ್ಯ, ನಿಷ್ಕ್ರಿಯತೆಯಿಂದ ಜನ ಬೇಸತ್ತಿದ್ದಾರೆ. ಅವರು ಸಿಎಂ ಆಗಿದ್ದಾಗ ಒಂದೇ ಒಂದು ಮನೆ ನೀಡಿಲ್ಲ. ಕುಮಾರಸ್ವಾಮಿಯವರು ಮೊದಲು ಪತ್ನಿ ಕರೆದುಕೊಂಡು ಬಂದರು. ಈಗ ಮಗನನ್ನು ಚುನಾವಣೆಗೆ ಕರೆತಂದಿದ್ದಾರೆ. ಇವರ ಮೇಲೆಯೇ ವಿಶ್ವಾಸವಿಲ್ಲ, ಇನ್ನು ಮಗನನ್ನು ಯಾರು ನಂಬುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಡಿವಿಎಸ್​ ಅನುಮತಿ ವಿಚಾರವಾಗಿ ಮಾತನಾಡಿದ್ದು, ಸದಾನಂದಗೌಡರು ಸಿಎಂ ಆಗಿದ್ದಾಗ ಅನುಮೋದನೆ ನೀಡಿದ್ದರು ಅಷ್ಟೇ. ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ರೂಪರೇಷೆ ಸಿದ್ಧಪಡಿಸಿದವರು ಯಾರು? ಬಹಳಷ್ಟು ಜನ ಮುಖ್ಯಮಂತ್ರಿಗಳು ಶಾಸಕರಿಗೆ ಸಹಾಯ ಮಾಡುತ್ತಾರೆ. ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಇದನ್ನೂ ಓದಿ: ಮತದಾರರ ಜೊತೆ ರಾಜನಂತೆ ವರ್ತಿಸಿರುವ ಕುಮಾರಸ್ವಾಮಿ ವಿಶ್ವಾಸ ಕಳೆದುಕೊಂಡಿದ್ದಾರೆ: ಯೋಗೇಶ್ವರ್

ನಾನು ಯಾವ ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮೊಮ್ಮಗನಾಗಿ ಮತ್ತು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್​ಡಿ ಕುಮಾರಸ್ವಾಮಿ ಅವರ ಮಗನಾಗಿ ಹುಟ್ಟಿದ್ದು ತಪ್ಪಾ ಎಂದು ಹೇಳುತ್ತಾ ಚನ್ನಪಟ್ಟಣ ಪ್ರಚಾರ ವೇಳೆ ಕಣ್ಣೀರು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:55 pm, Fri, 1 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್