ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್​ಗೆ ಶುರುವಾಯ್ತು ಹೊಸ ಆತಂಕ!

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋತಿರುವ ಆಘಾತ ಒಂದು ಕಡೆಯಾದರೆ, ಇದೀಗ ಜೆಡಿಎಸ್​ಗೆ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಅದಕ್ಕಿಂತಲೂ ಹೆಚ್ಚಿನ ಆತಂಕ ಶುರುವಾಗಿದೆ. ರಾಮನಗರದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಪ್ರಶ್ನೆ ಅವರಿಗೆ ಎದುರಾಗಿದೆ. ಜೆಡಿಎಸ್​ಗೆ ಎದುರಾಗಿರುವ ಹೊಸ ಆತಂಕ, ಸವಾಲುಗಳ ಬಗ್ಗೆ ಇಲ್ಲಿದೆ ವಿವರ.

ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್​ಗೆ ಶುರುವಾಯ್ತು ಹೊಸ ಆತಂಕ!
ಹೆಚ್​ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ
Follow us
Sunil MH
| Updated By: Ganapathi Sharma

Updated on: Nov 24, 2024 | 11:22 AM

ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್​ಗೆ ದೊಡ್ಡ ಆಘಾತವೇ ಎದುರಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಲೆಕ್ಕಾಚಾರ ಸಂಪೂರ್ಣ ಉಲ್ಟಾಪಲ್ಟಾ ಆಗಿದೆ. ಇದರಿಂದಾಗಿ ದಳಪತಿಗಳಿಗೆ ಆತಂಕವೂ ಹೆಚ್ಚಾಗಿದೆ. ನಿಖಿಲ್ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್​​ಗೆ ಹೊಸ ಟೆನ್ಷನ್ ಕೂಡ ಆರಂಭವಾಗಿದೆ.

ಸದ್ಯ ಉಪಚುನಾವಣೆ ಗೆಲುವಿನ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಡಿಕೆ ಸಹೋದರರು ಲಗ್ಗೆ ಇಟ್ಟಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸಹೋದರರ ಪ್ರವೇಶದಿಂದಾಗಿ ಒಕ್ಕಲಿಗ ಜೆಡಿಎಸ್ ನಾಯಕರನ್ನು ಕಾಂಗ್ರೆಸ್​​ಗೆ ಸೆಳೆಯುವ ಆತಂಕ ದಳಪತಿಗಳಿಗೆ ಎದುರಾಗಿದೆ.

ಕುಮಾರಸ್ವಾಮಿಗೆ ನಾಯಕರ ಹಿಡಿದಿಡುವ ಸವಾಲು

ಜೆಡಿಎಸ್ ಹಿರಿಯ ನಾಯಕ, ಶಾಸಕ ಜಿಟಿ ದೇವೇಗೌಡ ಈಗಾಗಲೇ ಪಕ್ಷದಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಅವರು ಕಾಂಗ್ರೆಸ್​​ಗೆ ಸೇರುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳೂ ಹರಿದಾಡಲು ಆರಂಭವಾಗಿದೆ. ಇಂಥ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್ ಮುಖಂಡರನ್ನು ಹಿಡಿದಿಟ್ಟುಕೊಳ್ಳುವ ಸವಾಲು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮೇಲಿದೆ.

ಗಟ್ಟಿಯಾದ ಯೋಗೇಶ್ವರ್, ಡಿಕೆ ಸಹೋದರರ ಸ್ನೇಹ

ಮತ್ತೊಂದೆಡೆ, ಉಪಚುನಾವಣೆ ಗೆಲುವಿನಿಂದ ಸಿಪಿ ಯೋಗೇಶ್ವರ್ ಹಾಗೂ ಡಿಕೆ ಸಹೋದರರ ನಡುವಣ ಸ್ನೇಹ ಮತ್ತಷ್ಟು ಗಟ್ಟಿಯಾಗಿದೆ. ಇದರೊಂದಿಗೆ, ಜೆಡಿಎಸ್ ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಸಂಪೂರ್ಣ ಹಿಡಿತ ಸಾಧಿಸಲು ಡಿಕೆ ಸಹೋದರರು ಯೋಜನೆ ರೂಪಿಸಿದ್ದಾರೆ. ಹೀಗಾಗಿ ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷಾಂತರ ಮಾಡುವ ಆತಂಕ ಜೆಡಿಎಸ್​​ಗೆ ಎದುರಾಗಿದೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಸ್ತಿತ್ವದ ಪ್ರಶ್ನೆ

ನಿಖಿಲ್ ಸೋಲಿನಿಂದ ಕುಮಾರಸ್ವಾಮಿ ರಾಮನಗರ ಜಿಲ್ಲೆಯಲ್ಲಿ ಅಧಿಕಾರದಿಂದ ದೂರ ಉಳಿದಂತಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳುವ ದೊಡ್ಡ ಜವಾಬ್ದಾರಿ, ಸವಾಲು ಕುಮಾರಸ್ವಾಮಿಗೆ ಎದುರಾಗಲಿದೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!

ಫಲಿತಾಂಶದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ನಿನ್ನೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಂದಿದೆ. ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ. ಫಲಿತಾಂಶವನ್ನು ಒಪ್ಪಿಕೊಳ್ಳಲೇಬೇಕು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ದರೂ ಆಮೇಲೆ ಮಾತನಾಡುತ್ತೇನೆ ಎಂದರು.

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್