AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್

ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂಬ ಸುದ್ದಿಗಳ ಮಧ್ಯೆಯೇ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್​ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​​ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್
ಕುಮಾರಸ್ವಾಮಿ, ಯೋಗೇಶ್ವರ್, ವಿಜಯೇಂದ್ರ (ಸಂಗ್ರಹ ಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 11, 2024 | 7:39 AM

Share

ರಾಮನಗರ, ಅಕ್ಟೋಬರ್ 11: ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ದಿನಾಂಕ ಘೋಷಣೆಗೂ ಮುನ್ನವೇ ಮ್ಯಾರಥಾನ್ ಮೀಟಿಂಗ್​ಗಳು ನಡೆಯುತ್ತಿವೆ. ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೋರಿ ಪಕ್ಷದ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಯಿತು. ಸಭೆಯಲ್ಲಿ, ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಯಿತು.

ಮಂಡ್ಯ ಬಿಟ್ಟು ಕೊಟ್ಟಿರಲಿಲ್ವಾ: ಪ್ರಶಾಂತ್ ​​​​​ಗೌಡ ಪ್ರಶ್ನೆ

ಮಂಡ್ಯವನ್ನು ನಾವು ಜೆಡಿಎಸ್​​ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ ಪ್ರಶಾಂತ್ ​​​​​ಗೌಡ ಆಗ್ರಹಿಸಿದರು.

ಕನಕಪುರದಲ್ಲಿ ಕುಮಾರಸ್ವಾಮಿ ಸಭೆ

ಒಂದೆಡೆ, ಬಿಜೆಪಿ ಸಭೆಗಳನ್ನು ಮಾಡುತ್ತಿದ್ದರೆ ಕನಕಪುರ ತಾಲೂಕಿನ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಜೆಡಿಎಸ್ ಸಭೆ ಕೂಡ ನಡೆಯಿತು. ಕಾರ್ಯಕರ್ತರು, ಮುಖಂಡರ ಜೊತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಭೆ ನಡೆಸಿದರು. ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯ ಪಡೆದೇ ತೀರ್ಮಾನಿಸಲಾಗುತ್ತದೆ ಎಂದರು.

ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ಸುಳಿವು ಕೊಟ್ಟ ಕುಮಾರಸ್ವಾಮಿ

ಒಟ್ಟಿನಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಆಗುವ ಮುನ್ನವೇ ದೋಸ್ತಿಗಳ ನಡುವೆ ಚನ್ನಪಟ್ಟಣ ಟಿಕೆಟ್ ಫೈಟ್ ತಾರಕಕ್ಕೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ