AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್

ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂಬ ಸುದ್ದಿಗಳ ಮಧ್ಯೆಯೇ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್​ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​​ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್
ಕುಮಾರಸ್ವಾಮಿ, ಯೋಗೇಶ್ವರ್, ವಿಜಯೇಂದ್ರ (ಸಂಗ್ರಹ ಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Oct 11, 2024 | 7:39 AM

Share

ರಾಮನಗರ, ಅಕ್ಟೋಬರ್ 11: ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ದಿನಾಂಕ ಘೋಷಣೆಗೂ ಮುನ್ನವೇ ಮ್ಯಾರಥಾನ್ ಮೀಟಿಂಗ್​ಗಳು ನಡೆಯುತ್ತಿವೆ. ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೋರಿ ಪಕ್ಷದ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಯಿತು. ಸಭೆಯಲ್ಲಿ, ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಯಿತು.

ಮಂಡ್ಯ ಬಿಟ್ಟು ಕೊಟ್ಟಿರಲಿಲ್ವಾ: ಪ್ರಶಾಂತ್ ​​​​​ಗೌಡ ಪ್ರಶ್ನೆ

ಮಂಡ್ಯವನ್ನು ನಾವು ಜೆಡಿಎಸ್​​ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ ಪ್ರಶಾಂತ್ ​​​​​ಗೌಡ ಆಗ್ರಹಿಸಿದರು.

ಕನಕಪುರದಲ್ಲಿ ಕುಮಾರಸ್ವಾಮಿ ಸಭೆ

ಒಂದೆಡೆ, ಬಿಜೆಪಿ ಸಭೆಗಳನ್ನು ಮಾಡುತ್ತಿದ್ದರೆ ಕನಕಪುರ ತಾಲೂಕಿನ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಜೆಡಿಎಸ್ ಸಭೆ ಕೂಡ ನಡೆಯಿತು. ಕಾರ್ಯಕರ್ತರು, ಮುಖಂಡರ ಜೊತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಭೆ ನಡೆಸಿದರು. ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯ ಪಡೆದೇ ತೀರ್ಮಾನಿಸಲಾಗುತ್ತದೆ ಎಂದರು.

ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ಸುಳಿವು ಕೊಟ್ಟ ಕುಮಾರಸ್ವಾಮಿ

ಒಟ್ಟಿನಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಆಗುವ ಮುನ್ನವೇ ದೋಸ್ತಿಗಳ ನಡುವೆ ಚನ್ನಪಟ್ಟಣ ಟಿಕೆಟ್ ಫೈಟ್ ತಾರಕಕ್ಕೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ