ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು

Kaveri Water Management Authority meeting; ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Aug 11, 2023 | 8:44 PM

ನವದೆಹಲಿ: ಕಾವೇರಿ ನದಿಯ ನೀರು ಹಂಚಿಕೆ ವಿಚಾರವಾಗಿ ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಶುಕ್ರವಾರ ನಡೆದ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Kaveri Water Management Authority)’ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕರ್ನಾಟಕದ (Karnataka) ಅಧಿಕಾರಿಗಳ ಮಾತು ಕೇಳದೆ, ನೀರು ಬಿಡುಗಡೆಗೆ ಪಟ್ಟು ಹಿಡಿದ ತಮಿಳುನಾಡು (Tamil Nadu) ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕರ್ನಾಟಕ ನೀರು ಬಿಡುತ್ತಿಲ್ಲ. ಕರ್ನಾಟಕದ ಅಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ತಮಿಳುನಾಡು ಅಧಿಕಾರಿಗಳು ಸಭೆಯಲ್ಲಿ ಆರೋಪ ಮಾಡಿದರು. ಇದೇ ವೇಳೆ, ಮಳೆ ಕೊರತೆಯಿಂದಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆ ಇರುವ ಬಗ್ಗೆ ಮನವರಿಕೆ ಮಾಡಿಕೊಡಲು ಕರ್ನಾಟಕದ ಅಧಿಕಾರಿಗಳು ಮುಂದಾದರು. ಕಾವೇರಿ ಕಣಿವೆಯ ವಾಸ್ತವ ಚಿತ್ರಣವನ್ನು ಮುಂದಿಟ್ಟರು. ಮಳೆ ಕೊರೆತೆಯ ಬಗ್ಗೆ ಕರ್ನಾಟಕದ ಅಧಿಕಾರಿಗಳು ಮಾಹಿತಿ ನೀಡಿದಾಗ, ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ನೇತೃತ್ವದ ಅಧಿಕಾರಿಗಳು ಸಭೆಯಿಂದ ಹೊರನಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ಆಗಸ್ಟ್ 9 ರೊಳಗೆ ಕರ್ನಾಟಕವು 37.9 ಟಿಎಂಸಿ ಕೊರತೆಯ ನೀರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ನೀರು ಬಿಡಲು ಪ್ರಾಧಿಕಾರವು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಕಾರಿಡಾರ್​​ಗಳು 2028ಕ್ಕೆ ಪೂರ್ಣ; ಸಚಿವ ಎಂಬಿ ಪಾಟೀಲ್

ಕರ್ನಾಟಕದ ಅಧಿಕಾರಿಗಳು ಹೇಳಿದ್ದೇನು?

ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಮಳೆಯಾಗಿಲ್ಲ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರೆತೆ ಇದೆ. ಈ ಕಾರಣದಿಂದಾಗಿ ಜಲಾಶಯಗಳು ಭರ್ತಿಯಾಗಿಲ್ಲ. ಜಲಾಶಯಗಳಲ್ಲಿ ನೀರು ಇಲ್ಲದಿರುವಾಗ ಎಲ್ಲಿಂದ ಬಿಡುವುದು? ಮುಂಗಾರು ಮಳೆ ಸರಿಯಾಗಿ ಆಗಿದ್ದರೆ ನೀರು ಬಿಡುತ್ತಿದ್ದೆವು. ಇದನ್ನು ಮಳೆ ಕೊರೆತೆಯ ವರ್ಷವೆಂದು ಪರಿಗಣಿಸಬೇಕು ಎಂದು ಕರ್ನಾಟಕದ ಅಧಿಕಾರಿಗಳು ಮನವಿ ಮಾಡಿದರು.

ಆಗಸ್ಟ್ 4 ರಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದರು. ಭತ್ತ ಬೆಳೆಗೆ ನೀರಿನ ತುರ್ತು ಅಗತ್ಯ ಇದೆ. ಕಾವೇರಿ ಡೆಲ್ಟಾದ ರೈತರ ಉಳಿವಿಗಾಗಿ ತಕ್ಷಣ ಗಮನಹರಿಸಬೇಕು ಎಂದು ಕೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Fri, 11 August 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ