AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು

Kaveri Water Management Authority meeting; ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on:Aug 11, 2023 | 8:44 PM

Share

ನವದೆಹಲಿ: ಕಾವೇರಿ ನದಿಯ ನೀರು ಹಂಚಿಕೆ ವಿಚಾರವಾಗಿ ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಶುಕ್ರವಾರ ನಡೆದ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Kaveri Water Management Authority)’ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕರ್ನಾಟಕದ (Karnataka) ಅಧಿಕಾರಿಗಳ ಮಾತು ಕೇಳದೆ, ನೀರು ಬಿಡುಗಡೆಗೆ ಪಟ್ಟು ಹಿಡಿದ ತಮಿಳುನಾಡು (Tamil Nadu) ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕರ್ನಾಟಕ ನೀರು ಬಿಡುತ್ತಿಲ್ಲ. ಕರ್ನಾಟಕದ ಅಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ತಮಿಳುನಾಡು ಅಧಿಕಾರಿಗಳು ಸಭೆಯಲ್ಲಿ ಆರೋಪ ಮಾಡಿದರು. ಇದೇ ವೇಳೆ, ಮಳೆ ಕೊರತೆಯಿಂದಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆ ಇರುವ ಬಗ್ಗೆ ಮನವರಿಕೆ ಮಾಡಿಕೊಡಲು ಕರ್ನಾಟಕದ ಅಧಿಕಾರಿಗಳು ಮುಂದಾದರು. ಕಾವೇರಿ ಕಣಿವೆಯ ವಾಸ್ತವ ಚಿತ್ರಣವನ್ನು ಮುಂದಿಟ್ಟರು. ಮಳೆ ಕೊರೆತೆಯ ಬಗ್ಗೆ ಕರ್ನಾಟಕದ ಅಧಿಕಾರಿಗಳು ಮಾಹಿತಿ ನೀಡಿದಾಗ, ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ನೇತೃತ್ವದ ಅಧಿಕಾರಿಗಳು ಸಭೆಯಿಂದ ಹೊರನಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ಆಗಸ್ಟ್ 9 ರೊಳಗೆ ಕರ್ನಾಟಕವು 37.9 ಟಿಎಂಸಿ ಕೊರತೆಯ ನೀರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ನೀರು ಬಿಡಲು ಪ್ರಾಧಿಕಾರವು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ತಮಿಳುನಾಡು ಪಾಲಿನ ನೀರನ್ನು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಜೂನ್ ತಿಂಗಳಿನಿಂದ ಆಗಸ್ಟ್ 9 ರವರೆಗೆ ಹರಿಸುವ ನೀರು ಬಾಕಿ ಉಳಿಸಿಕೊಂಡಿದೆ. 37.9 ಟಿಎಂಸಿ ನೀರು ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಉಳಿಸಿಕೊಂಡ ನೀರನ್ನು ಬಿಡಬೇಕು ಎಂದು ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ಒತ್ತಡ ಹೇರಿದರು. ಆದರೆ, ತಮಿಳುನಾಡು ಅಧಿಕಾರಿಗಳ ಬೇಡಿಕೆಗೆ ಕರ್ನಾಟಕ ಅಧಿಕಾರಿಗಳು ಒಪ್ಪಲಿಲ್ಲ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಕಾರಿಡಾರ್​​ಗಳು 2028ಕ್ಕೆ ಪೂರ್ಣ; ಸಚಿವ ಎಂಬಿ ಪಾಟೀಲ್

ಕರ್ನಾಟಕದ ಅಧಿಕಾರಿಗಳು ಹೇಳಿದ್ದೇನು?

ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಮಳೆಯಾಗಿಲ್ಲ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರೆತೆ ಇದೆ. ಈ ಕಾರಣದಿಂದಾಗಿ ಜಲಾಶಯಗಳು ಭರ್ತಿಯಾಗಿಲ್ಲ. ಜಲಾಶಯಗಳಲ್ಲಿ ನೀರು ಇಲ್ಲದಿರುವಾಗ ಎಲ್ಲಿಂದ ಬಿಡುವುದು? ಮುಂಗಾರು ಮಳೆ ಸರಿಯಾಗಿ ಆಗಿದ್ದರೆ ನೀರು ಬಿಡುತ್ತಿದ್ದೆವು. ಇದನ್ನು ಮಳೆ ಕೊರೆತೆಯ ವರ್ಷವೆಂದು ಪರಿಗಣಿಸಬೇಕು ಎಂದು ಕರ್ನಾಟಕದ ಅಧಿಕಾರಿಗಳು ಮನವಿ ಮಾಡಿದರು.

ಆಗಸ್ಟ್ 4 ರಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದರು. ಭತ್ತ ಬೆಳೆಗೆ ನೀರಿನ ತುರ್ತು ಅಗತ್ಯ ಇದೆ. ಕಾವೇರಿ ಡೆಲ್ಟಾದ ರೈತರ ಉಳಿವಿಗಾಗಿ ತಕ್ಷಣ ಗಮನಹರಿಸಬೇಕು ಎಂದು ಕೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Fri, 11 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ