ಬೇಲಿಯೇ ಎದ್ದು ಹೊಲ ಮೇಯ್ದಂತೆ: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಪ್ರೌಢಶಾಲೆ ಮುಖ್ಯ ಶಿಕ್ಷಕರಿಂದಲೇ ಪರೀಕ್ಷಾ ನಿಯಮ ಉಲ್ಲಂಘಿಸಿರುವಂತಹ ಘಟನೆ ನಡೆದಿದೆ. ಮಗನನ್ನು ಪಾಸ್ ಮಾಡಿಸಲು ಮುಖ್ಯ ಶಿಕ್ಷಕರಿಂದಲೇ ಚೀಟಿಂಗ್​ ಮಾಡಲಾಗಿದೆ. ಅಕ್ರಮದ ವಿಚಾರದ ಬಗ್ಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಪರ ಆಯುಕ್ತರಿಗೆ ಶಿವರಾಜ್ ಪತ್ರ ಬರೆದಿದ್ದಾರೆ. 

ಬೇಲಿಯೇ ಎದ್ದು ಹೊಲ ಮೇಯ್ದಂತೆ: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್
ಬೇಲಿಯೇ ಎದ್ದು ಹೊಲ ಮೇಯ್ದಂತೆ: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್
Edited By:

Updated on: Aug 26, 2024 | 11:09 PM

ಯಾದಗಿರಿ, ಆಗಸ್ಟ್​ 26: ಮಗನನ್ನು ಪಾಸ್ ಮಾಡಿಸಲು ಹೆಡ್ ಮಾಸ್ಟರ್ (headmaster) ಪರೀಕ್ಷಾ ನಿಯಮವನ್ನು ಉಲ್ಲಂಘಿಸಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಪ್ರೌಢಶಾಲೆ ನಡೆದಿದೆ. ಗುರುಬಸಪ್ಪ ಪರೀಕ್ಷಾ ನಿಯಮವನ್ನು ಉಲ್ಲಂಘಿಸಿರುವ ಮುಖ್ಯ ಶಿಕ್ಷಕ. ಮಗ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 2 ಬಾರಿ ಫೇಲ್ ಆಗಿದ್ದ. 3ನೇ ಬಾರಿಗೆ ಮತ್ತೆ ಪರೀಕ್ಷೆ ಬರೆಯುತ್ತಿದ್ದ. ಪರೀಕ್ಷಾ ಚೀಫ್ ಸುಪರಿಂಟೆಂಡೆಂಟ್ ಆಗಿದ್ದ ಶಿವರಾಜ್​​ಗೆ ಕರೆ ಮಾಡಿ ಅಕ್ರಮಕ್ಕೆ ಸಹಕರಿಸಿ ಎಂದು ಹೆಡ್​ಮಾಸ್ಟರ್ ಹೇಳಿದ್ದಾರೆ.

ಆ.2ರಿಂದ 8ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-3 ನಡೆದಿತ್ತು. ನಿಮ್ಮ ದಯೆಯಿಂದ ಪಾಸಾಗಲಿ ಎಂದು ಗುರುಬಸಪ್ಪ ಶಿವರಾಜ್​ ಬಳಿ ಬೇಡಿಕೊಂಡಿದ್ದರು. ಜೊತೆಗೆ ಗಣಿತ ವಿಷಯದ ಶಿಕ್ಷಕರು ಇದ್ದರೆ ನೋಡಿ ಎಂದು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂದು ವಿದ್ಯಾರ್ಥಿ ಮೇಲೆ ಕ್ರೌರ್ಯ ಮೆರೆದ ಶಿಕ್ಷಕ

ಅಷ್ಟೇ ಅಲ್ಲದೆ ಬೇರೊಬ್ಬ ವಿದ್ಯಾರ್ಥಿ ಕೂರಿಸಿ ಪರೀಕ್ಷೆ ಬರೆಸೋಣ ಎಂದು ಒತ್ತಡ ಹೇರಿದ್ದಾರೆ. ಅಕ್ರಮದ ವಿಚಾರದ ಬಗ್ಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಪರ ಆಯುಕ್ತರಿಗೆ ಶಿವರಾಜ್ ಪತ್ರ ಬರೆದಿದ್ದಾರೆ.

ಬಿಎಡ್ ಪರೀಕ್ಷೆಗಳಲ್ಲಿ ಸಾಮೂಹಿತಕ ನಕಲು

ವಿಜಯಪುರ: ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಅಧೀನದಲ್ಲಿ ನಡೆಯುವ ಬಿಡಿ ಜತ್ತಿ ಕಾಲೇಜ್ ಆಫ್ ಎಜುಕೇಶನ್​ನಲ್ಲಿ ಬಿಎಡ್ ಪರೀಕ್ಷೆಗಳು ಇತ್ತೀಚಿಗೆ ನಡೆದಿದ್ದವು. ಈ ವೇಳೆ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಎಲ್ಲೆಡೆ ಕಂಡು ಬಂದಿತ್ತು. ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಓಡಿಸ್ಸಾ ಮೂಲದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಿಎಡ್ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 84 ಪರೀಕ್ಷಾರ್ಥಿಗಳು ಪರೀಕ್ಷೆಗಳನ್ನು ಬರೆಯುತ್ತಿದ್ದು ಎಲ್ಲರೂ ಸಾಮೂಹಿಕ ನಕಲು ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಬಸವಸಾಗರದಿಂದ ಕೃಷ್ಣಾಗೆ ನೀರು ರಿಲೀಸ್; ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು

ನಿತ್ಯ ತರಗತಿಗಳಿಗೆ ಹಾಜರಾಗಿ ಇಲ್ಲಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗೆ ಮಾತ್ರ ಹಾಜರಾಗಿದ್ದರು. ಕ್ಲಾಸ್​ಗೆ ಹಾಜರಾಗದೇ ಎಕ್ಸಾಂಗೆ ಮಾತ್ರ ಹಾಜರಾಗಿದ್ದ ಕಾರಣ ಇಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿತ್ತು ಎಂದು ಪರೀಕ್ಷಾ ಪರಿವೀಕ್ಷಕರು ಆರೋಪ ಮಾಡಿದ್ದರು. ಜುಲೈ 19 ರಿಂದಲೇ ಪರೀಕ್ಷೆಗಳು ನಡೆದಿದ್ದು ನಿತ್ಯ ನಕಲು ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವಿಡಿಯೋ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us