AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Chaithra Kundapur cheating case: ವಂಚನೆ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಅವರಿಂದ 56 ಲಕ್ಷ ನಗದು ಹಾಗೂ 25 ಲಕ್ಷ ಮೌಲ್ಯದ ಕಾರನ್ನು ಗುರುವಾರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಉಳಿದ ಹಣದ ಬಗ್ಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು
ಚೈತ್ರಾ ಕುಂದಾಪುರ & ಅಭಿನವ ಹಾಲಶ್ರೀ
TV9 Web
| Edited By: |

Updated on: Sep 23, 2023 | 4:00 PM

Share

ಬೆಂಗಳೂರು, ಸೆಪ್ಟೆಂಬರ್ 23: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಶಾಮೀಲಾಗಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ (Chaithra Kundapura) ಹಾಗೂ ಇತರರಿಗೆ ಸಂದಾಯವಾಗಿದ್ದ 5 ಕೋಟಿ ರೂ.ಗಳಲ್ಲಿ ಶೇ 80ರಷ್ಟು ಹಣವನ್ನು ಕೇಂದ್ರ ಅಪರಾಧ ವಿಭಾಗದ (CCB Police) ಪೊಲೀಸರು ವಶಪಡಿಸಿಕೊಂಡಿದ್ದಾರೆ. 80 ಲಕ್ಷ ನಗದು, 23 ಲಕ್ಷ ಮೌಲ್ಯದ ಚಿನ್ನಾಭರಣ, ಬ್ಯಾಂಕ್‌ನಿಂದ 1.08 ಕೋಟಿ ಹಣ, ಚೈತ್ರಾ ಅವರ ಬಳಿಯಿದ್ದ 12 ಲಕ್ಷ ಮೌಲ್ಯದ ಕೆಐಎ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಗಗನ್ ಕಡೂರ್ ಮತ್ತು ದನರಾಶ್ ರಮೇಶ್ ಅವರಿಂದ 26 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ವಂಚನೆ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಅವರಿಂದ 56 ಲಕ್ಷ ನಗದು ಹಾಗೂ 25 ಲಕ್ಷ ಮೌಲ್ಯದ ಕಾರನ್ನು ಗುರುವಾರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಉಳಿದ ಹಣದ ಬಗ್ಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಎಂಟು ಜನರನ್ನು ಬಂಧಿಸಿದ್ದು, ನಾಲ್ವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಚೈತ್ರಾ, ಗಗನ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಮತ್ತು ಶ್ರೀಕಾಂತ್ ಅವರ ಹೇಳಿಕೆಗಳನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಅಭಿನವ ಹಾಲಶ್ರೀ ಅವರನ್ನು ಇನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲಾ ಪಕ್ಷದಲ್ಲೂ ಇರುತ್ತಾರೆ; ಚೈತ್ರಾ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು -ಅರವಿಂದ ಬೆಲ್ಲದ್

ಚೈತ್ರಾ ಮತ್ತು ಅವರ ಸಹಚರರಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ ನಂತರ ಬಿಜೆಪಿ ಶಾಸಕ ಟಿಕೆಟ್ ಹಗರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿದ್ದಾಗಿ ಪೂಜಾರಿ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ