AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ […]

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!
ಸಾಧು ಶ್ರೀನಾಥ್​
|

Updated on:Nov 30, 2019 | 10:57 AM

Share

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ.

ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನೆಲೆಸಿತ್ತು.

ಇದೀಗ ಅಲ್ಲಲ್ಲಿ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಚಳಿಗಾಲದಲ್ಲಿ ಮಳೆಯಾದ್ರೆ ಚಳಿ ಕೊರೆತ ಇನ್ನೂ ತೀವ್ರವಾದೀತು. ಆದ್ರೆ ಬೆಂಗಳೂರು ಮಂದಿ ವೀಕೆಂಡ್​ ಮೂಡ್​ನಲ್ಲಿದ್ದು, ಹ್ಯಾಪಿ ಸ್ನೇಕ್ ರೈನ್ಸ್​ ಅನ್ನುತ್ತಿದ್ದಾರೆ.

ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಇನ್ನೂ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ, ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Published On - 10:54 am, Sat, 30 November 19

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ