AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?