AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ