AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ