AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್