AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ