AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ