AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 01, 2022 | 4:15 PM

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ