AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADB ಭೂ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿಎಸ್‌ವೈ, ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಎದುರಾಯ್ತು ಸಂಕಷ್ಟ

ಡಿನೋಟಿಫಿಕೇಷನ್​ ಭೂತ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಕಾಡಲು ಮುಂದಾಗಿದೆ. ಇದೀಗ, ಇದೇ ವಿಚಾರದಲ್ಲಿ ಸಿಎಂ ಬಿಎಸ್‌ವೈ ಹಾಗೂ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಸಂಕಷ್ಟ ಎದುರಾಗಿದೆ.

KIADB ಭೂ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿಎಸ್‌ವೈ, ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಎದುರಾಯ್ತು ಸಂಕಷ್ಟ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
| Edited By: |

Updated on:Mar 18, 2021 | 7:20 AM

Share

ಬೆಂಗಳೂರು: ಡಿನೋಟಿಫಿಕೇಷನ್​ ಭೂತ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಕಾಡಲು ಮುಂದಾಗಿದೆ. ಇದೀಗ, ಇದೇ ವಿಚಾರದಲ್ಲಿ ಸಿಎಂ ಬಿಎಸ್‌ವೈ ಹಾಗೂ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಸಂಕಷ್ಟ ಎದುರಾಗಿದೆ. ಹೌದು, ಕೆಐಎಡಿಬಿ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದೆ. ಜೊತೆಗೆ, ಚಾರ್ಜ್‌ಶೀಟ್‌ ಆಧರಿಸಿ ಕ್ರಮ ಜರುಗಿಸುವಂತೆ ಹೈಕೋರ್ಟ್‌ನಿಂದ‌ ಆದೇಶ ಹೊರಬಿದ್ದಿದೆ.

ಏನಿದು ಪ್ರಕರಣ? ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿ ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಲಾಗಿದೆ. ಸುಮಾರು 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.

ಇದೀಗ, 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಜರುಗಿಸಲು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ನ್ಯಾ.ಜಾನ್ ಮೈಕೆಲ್ ಕುನ್ಹಾರವರಿದ್ದ ಪೀಠದಿಂದ ಆದೇಶ ಹೊರಬಿದ್ದಿದೆ.

ಅಷ್ಟಕ್ಕೂ ಸಿಎಂ ಬಿಎಸ್‌ವೈ ಮೇಲಿರುವ ಆರೋಪಗಳೇನು ಅಂತ ನೋಡೋದಾದ್ರೆ.. ಬಿಎಸ್‌ವೈ ಮೇಲಿರೋ ಆರೋಪಗಳೇನು? ಬೆಂಗಳೂರು ಉತ್ತರ ತಾಲೂಕು ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿಗೆ ಸೇರಿದ್ದ 20 ಎಕರೆ ಜಮೀನನ್ನು ಭೂ ಸ್ವಾಧೀನದಿಂದ ಕೈಬಿಟ್ಟ ಆರೋಪ ಬಿಎಸ್‌ವೈ ಮೇಲಿದೆ. ಹಾರ್ಡ್‌ವೇರ್‌ ಪಾರ್ಕ್‌ನ ಮಧ್ಯಭಾಗದ ಜಮೀನನ್ನು ಭೂ ಮಾಲೀಕರಿಗೆ ಡಿನೋಟಿಫಿಕೇಷನ್‌ ಮಾಡಿದ ಆರೋಪವಿದೆ. ಭೂಸ್ವಾಧೀನಗೊಂಡು ನಿವೇಶನ ಅಭಿವೃದ್ಧಿ ಪಡಿಸಿದ ಬಳಿಕವೂ ನಿಯಮ ಪಾಲಿಸದೇ ಡಿನೋಟಿಫಿಕೇಷನ್‌ ಮಾಡಿ ಸರ್ಕಾರದ ಬೊಕ್ಕಸಕ್ಕೆ 6 ಕೋಟಿ ರೂಪಾಯಿ ನಷ್ಟವುಂಟು ಮಾಡಿದ ಆರೋಪ ಹೊತ್ತಿದ್ದಾರೆ.

ಇನ್ನು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಎದುರಿಸ್ತಿರೋ ಆರೋಪ ಏನು ಅಂತ ನೋಡಿದ್ರೆ.. ಕಟ್ಟಾ ವಿರುದ್ಧದ ಆರೋಪಗಳೇನು? ಇನ್ನು ಆಗ ಸಚಿವರಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ದಾಬಸ್‌ಪೇಟೆ ಬಳಿಯ 4 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಷನ್‌ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸೋಂಪುರ ಕೈಗಾಗಿಕಾ ಪ್ರದೇಶದಲ್ಲಿನ ಅಭಿವೃದ್ಧಿ ಹೊಂದಿದ ನಿವೇಶನ ಭೂಮಾಲೀಕರಿಗೆ ಬಿಟ್ಟುಕೊಟ್ಟು ಸರ್ಕಾರದ ಬೊಕ್ಕಸಕ್ಕೆ 1 ಕೋಟಿ 30ಲಕ್ಷ ರೂಪಾಯಿ ನಷ್ಟ ಉಂಟು ಮಾಡಿದ ಆರೋಪ ಎದುರಿಸ್ತಿದ್ದಾರೆ.

ಒಟ್ನಲ್ಲಿ 10 ವರ್ಷಗಳ ಹಿಂದಿನ ಪ್ರಕರಣ ಸಿಎಂ ಹಾಗೂ ಮಾಜಿ ಸಚಿವರಿಗೆ ಇಕ್ಕಟ್ಟು ತಂದೊಡ್ಡಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಇವರಿಬ್ಬರ ವಿಚಾರಣೆ ನಡೆಯಲಿದೆ. ಆದ್ರೆ ಬಿಎಸ್‌ವೈ ಹಾಗೂ ಕಟ್ಟಾಸುಬ್ರಹ್ಮಣ್ಯ ನಾಯ್ಡು ಇಬ್ಬರೂ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರೋ ಸಾಧ್ಯತೆಯಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!

Published On - 5:45 pm, Wed, 17 March 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ